ರೈತ ಮುಖಂಡ ರಾಕೇಶ್ ಟಿಕಾಯತ್ 
ದೇಶ

ರೈತರ ಪ್ರತಿಭಟನೆ ಅಂತ್ಯ?: ಗೃಹ ಸಚಿವ, ಕೃಷಿ ಸಚಿವರನ್ನು ಭೇಟಿಯಾಗಲಿರುವ ಎಸ್ ಕೆಎಂ ಸಮಿತಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಅಂತ್ಯಗೊಳುವ ಸಾಧ್ಯತೆ ಇದ್ದು, ಸಂಯುಕ್ತ ಕಿಸಾನ್ ಮೋರ್ಚದ ಸಮಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಲಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಅಂತ್ಯಗೊಳುವ ಸಾಧ್ಯತೆ ಇದ್ದು, ಸಂಯುಕ್ತ ಕಿಸಾನ್ ಮೋರ್ಚದ ಸಮಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಕೃಷಿಗೆ ಸಂಬಂಧಿಸಿದಂತೆ ಬಾಕಿ ಇರುವ ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಇದೇ ವೇಳೆ ಎಸ್ ಕೆಎಂ ರೈತ ಸಂಘಟನೆಗಳೊಂದಿಗೆ ಸಿಂಘು ಗಡಿ ಭಾಗದಲ್ಲಿ ಮಹತ್ವದ ಸಭೆ ನಡೆಸಲಿದ್ದು ಪ್ರತಿಭಟನೆಗೆ ಸಂಬಂಧಿಸಿದಂತೆ ಮುಂದೇನು ಮಾಡಬೇಕೆಂಬ ನಿರ್ಣಯ ಕೈಗೊಳ್ಳಲಿದೆ ಎಂದು ಹಿರಿಯ ರೈತ ನಾಯಕರೊಬ್ಬರು ತಿಳಿಸಿದ್ದಾರೆ. 

ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ವರ್ತನೆ ಸಕಾರಾತ್ಮಕವಾಗಿದೆ. ರೈತ ಚಳುವಳಿ ವಿಷಯವಾಗಿ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವ ಸೂಚನೆಯನ್ನು ಸರ್ಕಾರ ನೀಡಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚ ತಿಳಿಸಿದೆ. ಪ್ರತಿಭಟನಾ ನಿರತ ರೈತರ ವಿರುದ್ಧದ ನಕಲಿ ಕೇಸ್ ಗಳನ್ನು ಹಿಂಪಡೆಯಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ರೈತ ಸಂಘಟನೆಗಳು ಸರ್ಕಾರದ ಮುಂದಿಟ್ಟಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT