ರೈತ ಮುಖಂಡ ರಾಕೇಶ್ ಟಿಕಾಯತ್ 
ದೇಶ

ರೈತರ ಪ್ರತಿಭಟನೆ ಅಂತ್ಯ?: ಗೃಹ ಸಚಿವ, ಕೃಷಿ ಸಚಿವರನ್ನು ಭೇಟಿಯಾಗಲಿರುವ ಎಸ್ ಕೆಎಂ ಸಮಿತಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಅಂತ್ಯಗೊಳುವ ಸಾಧ್ಯತೆ ಇದ್ದು, ಸಂಯುಕ್ತ ಕಿಸಾನ್ ಮೋರ್ಚದ ಸಮಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಲಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಅಂತ್ಯಗೊಳುವ ಸಾಧ್ಯತೆ ಇದ್ದು, ಸಂಯುಕ್ತ ಕಿಸಾನ್ ಮೋರ್ಚದ ಸಮಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಕೃಷಿಗೆ ಸಂಬಂಧಿಸಿದಂತೆ ಬಾಕಿ ಇರುವ ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಇದೇ ವೇಳೆ ಎಸ್ ಕೆಎಂ ರೈತ ಸಂಘಟನೆಗಳೊಂದಿಗೆ ಸಿಂಘು ಗಡಿ ಭಾಗದಲ್ಲಿ ಮಹತ್ವದ ಸಭೆ ನಡೆಸಲಿದ್ದು ಪ್ರತಿಭಟನೆಗೆ ಸಂಬಂಧಿಸಿದಂತೆ ಮುಂದೇನು ಮಾಡಬೇಕೆಂಬ ನಿರ್ಣಯ ಕೈಗೊಳ್ಳಲಿದೆ ಎಂದು ಹಿರಿಯ ರೈತ ನಾಯಕರೊಬ್ಬರು ತಿಳಿಸಿದ್ದಾರೆ. 

ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ವರ್ತನೆ ಸಕಾರಾತ್ಮಕವಾಗಿದೆ. ರೈತ ಚಳುವಳಿ ವಿಷಯವಾಗಿ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವ ಸೂಚನೆಯನ್ನು ಸರ್ಕಾರ ನೀಡಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚ ತಿಳಿಸಿದೆ. ಪ್ರತಿಭಟನಾ ನಿರತ ರೈತರ ವಿರುದ್ಧದ ನಕಲಿ ಕೇಸ್ ಗಳನ್ನು ಹಿಂಪಡೆಯಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ರೈತ ಸಂಘಟನೆಗಳು ಸರ್ಕಾರದ ಮುಂದಿಟ್ಟಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT