ರೈತ ಮುಖಂಡ ರಾಕೇಶ್ ಟಿಕಾಯತ್ 
ದೇಶ

ರೈತರ ಪ್ರತಿಭಟನೆ ಅಂತ್ಯ?: ಗೃಹ ಸಚಿವ, ಕೃಷಿ ಸಚಿವರನ್ನು ಭೇಟಿಯಾಗಲಿರುವ ಎಸ್ ಕೆಎಂ ಸಮಿತಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಅಂತ್ಯಗೊಳುವ ಸಾಧ್ಯತೆ ಇದ್ದು, ಸಂಯುಕ್ತ ಕಿಸಾನ್ ಮೋರ್ಚದ ಸಮಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಲಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಅಂತ್ಯಗೊಳುವ ಸಾಧ್ಯತೆ ಇದ್ದು, ಸಂಯುಕ್ತ ಕಿಸಾನ್ ಮೋರ್ಚದ ಸಮಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಕೃಷಿಗೆ ಸಂಬಂಧಿಸಿದಂತೆ ಬಾಕಿ ಇರುವ ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಇದೇ ವೇಳೆ ಎಸ್ ಕೆಎಂ ರೈತ ಸಂಘಟನೆಗಳೊಂದಿಗೆ ಸಿಂಘು ಗಡಿ ಭಾಗದಲ್ಲಿ ಮಹತ್ವದ ಸಭೆ ನಡೆಸಲಿದ್ದು ಪ್ರತಿಭಟನೆಗೆ ಸಂಬಂಧಿಸಿದಂತೆ ಮುಂದೇನು ಮಾಡಬೇಕೆಂಬ ನಿರ್ಣಯ ಕೈಗೊಳ್ಳಲಿದೆ ಎಂದು ಹಿರಿಯ ರೈತ ನಾಯಕರೊಬ್ಬರು ತಿಳಿಸಿದ್ದಾರೆ. 

ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ವರ್ತನೆ ಸಕಾರಾತ್ಮಕವಾಗಿದೆ. ರೈತ ಚಳುವಳಿ ವಿಷಯವಾಗಿ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವ ಸೂಚನೆಯನ್ನು ಸರ್ಕಾರ ನೀಡಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚ ತಿಳಿಸಿದೆ. ಪ್ರತಿಭಟನಾ ನಿರತ ರೈತರ ವಿರುದ್ಧದ ನಕಲಿ ಕೇಸ್ ಗಳನ್ನು ಹಿಂಪಡೆಯಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ರೈತ ಸಂಘಟನೆಗಳು ಸರ್ಕಾರದ ಮುಂದಿಟ್ಟಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal flood: ಮೃತರ ಸಂಖ್ಯೆ 270ಕ್ಕೆ ಏರಿಕೆ, ಸುಮಾರು 288 ಭಾರತೀಯರು ನಾಪತ್ತೆ! 800ಕ್ಕೂ ಹೆಚ್ಚು ಜನರ ರಕ್ಷಣೆ