ಅಪಘಾತಕ್ಕೀಡಾದ Mi-17V-5 ಹೆಲಿಕಾಪ್ಟರ್ 
ದೇಶ

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರನ್ನು ಬಲಿ ಪಡೆದ ಹೆಲಿಕಾಪ್ಟರ್ ಅವಘಡಕ್ಕೆ ಹವಾಮಾನ ಕಾರಣ: ಮಾಜಿ ಯುದ್ಧವಿಮಾನ ಚಾಲಕ ಶಂಕೆ 

ಕಳೆದ 30- 40 ವರ್ಷಗಳಲ್ಲಿ Mi-17V-5 ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾದ ಎಮರ್ಜೆನ್ಸಿ ಸನ್ನಿವೇಶಗಳು ಒಂದೆರಡು ಬಾರಿ ಬಂದಿರಬಹುದು ಅಷ್ಟೇ ಎನ್ನುತ್ತಾರೆ ಚೆನ್ನೈ ಮೂಲದ ಮಾಜಿ ವಾಯುಪಡೆ ಪೈಲಟ್.

ಚೆನ್ನೈ: ಸೂಲೂರಿನಿಂದ ವೆಲ್ಲಿಂಗ್ಟನ್ ಗೆ ಹೆಲಿಕಾಪ್ಟರಿನಲ್ಲಿ 20 ನಿಮಿಷಗಳ ಪಯಣ. ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ Mi-17V-5 ಹೆಲಿಕಾಪ್ಟರ್ ಜಗತ್ತಿನಲ್ಲೇ ಸುರಕ್ಷಿತ ಹೆಲಿಕಾಪ್ಟರ್ ಎನ್ನುವ ಹೆಸರಿಗೆ ಪಾತ್ರವಾದುದು. ಪ್ರಧಾನಿ, ಅಧ್ಯಕ್ಷರು ಸೇರಿದಂತೆ ವಿವಿಐಪಿಗಳು ಈ ಹೆಲಿಕಾಪ್ಟರನ್ನು ಬಳಸುತ್ತಾರೆ. 

Mi-17V-5 ಹೆಲಿಕಾಪ್ಟರ್ ಅನ್ನು ರಷ್ಯಾದ ಕಜನ್ ಸಂಸ್ಥೆಯ ಅಂಗಸಂಸ್ಥೆ ನಿರ್ಮಾಣ ಮಾಡಿದೆ. ತುರ್ತು ಭೂಸ್ಪರ್ಶ ಮಾಡಬೇಕಾದ ಸನ್ನಿವೇಶಗಳು ಈ ಹೆಲಿಕಾಪ್ಟರಿನಲ್ಲಿ ಬರುವುದು ತುಂಬಾ ಅಪರೂಪ ಎನ್ನುವುದು ಚೆನ್ನೈ ಮೂಲದ ಮಾಜಿ ವಾಯುಪಡೆ ಚಾಲಕರ ಅಭಿಪ್ರಾಯ. 

ಕಳೆದ 30- 40 ವರ್ಷಗಳಲ್ಲಿ Mi-17V-5 ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾದ ಎಮರ್ಜೆನ್ಸಿ ಸನ್ನಿವೇಶಗಳು ಒಂದೆರಡು ಬಾರಿ ಬಂದಿರಬಹುದು ಅಷ್ಟೇ ಎನ್ನುತ್ತಾರೆ ಮಾಜಿ ಪೈಲಟ್.

ಹೀಗಾಗಿ ಸಹಜವಾಗಿ ಅವರೂ ಪ್ರತಿಕೂಲ ಹವಾಮಾನವೇ ಅಪಘಾತಕ್ಕೆ ಕಾರಣ ಎಂದು ಬಲವಾಗಿ ಪ್ರತಿಪಾದಿಸುತ್ತಾರೆ. ಊಟಿ ಬಳಿಯ ಕೂನೂರಿನಲ್ಲಿ ಮಂಜು ಮುಸಿಕಿದ ವಾತಾವರಣವಿದೆ. ದಟ್ಟವಾದ ಮಂಜಿನ ಕಾರಣದಿಂದ ಹೆಲಿಕಾಪ್ಟರ್ ಪೈಲಟ್ ಗೆ ತಾನು ಪರ್ವತದತ್ತ ಧಾವಿಸುತ್ತಿರುವುದು ಗೊತ್ತಾಗಿಲ್ಲ ಎಂದು ಅವರು ಊಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ