ಅಪಘಾತಕ್ಕೀಡಾದ Mi-17V-5 ಹೆಲಿಕಾಪ್ಟರ್ 
ದೇಶ

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರನ್ನು ಬಲಿ ಪಡೆದ ಹೆಲಿಕಾಪ್ಟರ್ ಅವಘಡಕ್ಕೆ ಹವಾಮಾನ ಕಾರಣ: ಮಾಜಿ ಯುದ್ಧವಿಮಾನ ಚಾಲಕ ಶಂಕೆ 

ಕಳೆದ 30- 40 ವರ್ಷಗಳಲ್ಲಿ Mi-17V-5 ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾದ ಎಮರ್ಜೆನ್ಸಿ ಸನ್ನಿವೇಶಗಳು ಒಂದೆರಡು ಬಾರಿ ಬಂದಿರಬಹುದು ಅಷ್ಟೇ ಎನ್ನುತ್ತಾರೆ ಚೆನ್ನೈ ಮೂಲದ ಮಾಜಿ ವಾಯುಪಡೆ ಪೈಲಟ್.

ಚೆನ್ನೈ: ಸೂಲೂರಿನಿಂದ ವೆಲ್ಲಿಂಗ್ಟನ್ ಗೆ ಹೆಲಿಕಾಪ್ಟರಿನಲ್ಲಿ 20 ನಿಮಿಷಗಳ ಪಯಣ. ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ Mi-17V-5 ಹೆಲಿಕಾಪ್ಟರ್ ಜಗತ್ತಿನಲ್ಲೇ ಸುರಕ್ಷಿತ ಹೆಲಿಕಾಪ್ಟರ್ ಎನ್ನುವ ಹೆಸರಿಗೆ ಪಾತ್ರವಾದುದು. ಪ್ರಧಾನಿ, ಅಧ್ಯಕ್ಷರು ಸೇರಿದಂತೆ ವಿವಿಐಪಿಗಳು ಈ ಹೆಲಿಕಾಪ್ಟರನ್ನು ಬಳಸುತ್ತಾರೆ. 

Mi-17V-5 ಹೆಲಿಕಾಪ್ಟರ್ ಅನ್ನು ರಷ್ಯಾದ ಕಜನ್ ಸಂಸ್ಥೆಯ ಅಂಗಸಂಸ್ಥೆ ನಿರ್ಮಾಣ ಮಾಡಿದೆ. ತುರ್ತು ಭೂಸ್ಪರ್ಶ ಮಾಡಬೇಕಾದ ಸನ್ನಿವೇಶಗಳು ಈ ಹೆಲಿಕಾಪ್ಟರಿನಲ್ಲಿ ಬರುವುದು ತುಂಬಾ ಅಪರೂಪ ಎನ್ನುವುದು ಚೆನ್ನೈ ಮೂಲದ ಮಾಜಿ ವಾಯುಪಡೆ ಚಾಲಕರ ಅಭಿಪ್ರಾಯ. 

ಕಳೆದ 30- 40 ವರ್ಷಗಳಲ್ಲಿ Mi-17V-5 ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾದ ಎಮರ್ಜೆನ್ಸಿ ಸನ್ನಿವೇಶಗಳು ಒಂದೆರಡು ಬಾರಿ ಬಂದಿರಬಹುದು ಅಷ್ಟೇ ಎನ್ನುತ್ತಾರೆ ಮಾಜಿ ಪೈಲಟ್.

ಹೀಗಾಗಿ ಸಹಜವಾಗಿ ಅವರೂ ಪ್ರತಿಕೂಲ ಹವಾಮಾನವೇ ಅಪಘಾತಕ್ಕೆ ಕಾರಣ ಎಂದು ಬಲವಾಗಿ ಪ್ರತಿಪಾದಿಸುತ್ತಾರೆ. ಊಟಿ ಬಳಿಯ ಕೂನೂರಿನಲ್ಲಿ ಮಂಜು ಮುಸಿಕಿದ ವಾತಾವರಣವಿದೆ. ದಟ್ಟವಾದ ಮಂಜಿನ ಕಾರಣದಿಂದ ಹೆಲಿಕಾಪ್ಟರ್ ಪೈಲಟ್ ಗೆ ತಾನು ಪರ್ವತದತ್ತ ಧಾವಿಸುತ್ತಿರುವುದು ಗೊತ್ತಾಗಿಲ್ಲ ಎಂದು ಅವರು ಊಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT