ಆಕ್ರೋಶಗೊಂಡ ಗ್ರಾಮಸ್ಥರಿಂದ ಸೇನಾ ವಾಹನಕ್ಕೆ ಬೆಂಕಿ (ಸಂಗ್ರಹ ಚಿತ್ರ) 
ದೇಶ

ನಾಗಾಲ್ಯಾಂಡ್ ಹತ್ಯೆ: ಬದುಕಿ ಉಳಿದವರ ಸ್ಥಿತಿ ಗಂಭೀರ; ಮಾಧ್ಯಮಗಳೊಂದಿಗೆ ಮಾತನಾಡದಂತೆ ಸಂಬಂಧಿಕರಿಗೆ ಸೂಚನೆ

ನಾಗಾಲ್ಯಾಂಡ್ ನಲ್ಲಿ ಸೇನಾ ದಾಳಿಗೆ ತುತ್ತಾಗಿದ್ದ ಪ್ರಜೆಗಳ ಪೈಕಿ ಬದುಕಿ ಉಳಿದಿದ್ದ ಇಬ್ಬರ ಪರಿಸ್ಥಿತಿ ಈಗ ಗಂಭೀರವಾಗಿದೆ.

ದಿಬ್ರುಘರ್: ನಾಗಾಲ್ಯಾಂಡ್ ನಲ್ಲಿ ಸೇನಾ ದಾಳಿಗೆ ತುತ್ತಾಗಿದ್ದ ಪ್ರಜೆಗಳ ಪೈಕಿ ಬದುಕಿ ಉಳಿದಿದ್ದ ಇಬ್ಬರ ಪರಿಸ್ಥಿತಿ ಈಗ ಗಂಭೀರವಾಗಿದೆ. ಸಂಬಂಧಿಕರಿಗೆ 13 ಮಂದಿ ಗ್ರಾಮಸ್ಥರ ಸಾವಿಗೆ ಕಾರಣವಾದ ಘಟನೆಯ ಬಗ್ಗೆ ಮಾತನಾಡದಂತೆ ನಾಗಾಲ್ಯಾಂಡ್ ನ ಅಧಿಕಾರಿಗಳು ಸೂಚನೆ ನೀಡಿದ್ದಾರೆ. 

ಈ ಬಗ್ಗೆ ಸಂತ್ರಸ್ತರ ಸಂಬಂಧಿಕರು ಮಾಹಿತಿ ನೀಡಿದ್ದು, 30 ವರ್ಷಗಳ ಯೆವಾಂಗ್ ಕೊನ್ಯಾಕ್ ಹಾಗೂ ಶೇವಾಂಗ್ ಕೊನ್ಯಾಕ್ (22) ಇಬ್ಬರೂ ದಾಳಿಯಲ್ಲಿ ಗಾಯಗೊಂಡಿದ್ದು ದಿಬ್ರುಘರ್ ನ ಅಸ್ಸಾಂ ವೈದ್ಯಕೀಯ ಕಾಲೇಜು ಆಸ್ಪತ್ರೆ (ಎಎಂಸಿಹೆಚ್) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇಬ್ಬರೂ ಗಾಯಾಳುಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರ ಪೈಕಿ ಓರ್ವನಿಗೆ ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು ಮತ್ತೊಂದು ವೈದ್ಯಕೀಯ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ಹಿಂದೆ ಘಟನೆ ಬಗ್ಗೆ ಮಾಹಿತಿ ನೀಡುತ್ತಿದ್ದ ರೋಗಿಗಳು ಹಾಗೂ ಅವರ ಕುಟುಂಬ ಸದಸ್ಯರು ಈಗ ಮೌನಕ್ಕೆ ಶರಣಾಗಿದ್ದು ತಮಗೆ ಮಾಧ್ಯಮಗಳೂ ಸೇರಿದಂತೆ ಯಾರೊಂದಿಗೂ ಈ ಘಟನೆಯ ಬಗ್ಗೆ ಮಾತನಾಡದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದಷ್ಟೇ ಹೇಳಿದ್ದಾರೆ.

"ದಯಮಾಡಿ ನಮ್ಮನ್ನು ಏನೂ ಕೇಳಬೇಡಿ. ಆ ಘಟನೆಯ ಬಗ್ಗೆ ಏನನ್ನೂ ಮಾತನಾಡದಂತೆ ಸೂಚನೆ ಬಂದಿದೆ" ಎಂದು ಓರ್ವ ಗಾಯಾಳುವಿನ ಸಂಬಂಧಿಕರು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT