ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಜನವರಿ 31ರವರೆಗೆ ವಿಸ್ತರಣೆ

ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಮುಂದಿನ ವರ್ಷ ಜನವರಿ 31ರವರೆಗೆ ವಿಸ್ತರಿಸಲಾಗಿದೆ. 

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಮುಂದಿನ ವರ್ಷ ಜನವರಿ 31ರವರೆಗೆ ವಿಸ್ತರಿಸಲಾಗಿದೆ. 

ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಜನವರಿ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಗುರುವಾರ ಅಧಿಸೂಚನೆ ಹೊರಡಿಸಿದೆ.

ಅದಾಗ್ಯೂ ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ ಮತ್ತು ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.

ಡಿಜಿಸಿಎ ಡಿಸೆಂಬರ್ 15 ರಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ನಿರ್ಧರಿಸಿತ್ತು. ಆದರೆ ಕೊರೋನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ನಂತರ ತನ್ನ ನಿರ್ಧಾರ ಬದಲಿಸಿದ ಡಿಜಿಸಿಎ ಮುಂದಿನ ಜನವರಿ 31ರ ವರೆಗೆ ಅಂತರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧವನ್ನು ಮುಂದುವರೆಸಿದೆ.

ಕಳೆದ ವರ್ಷ ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ 'ಏರ್ ಬಬಲ್' ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತರಾಷ್ಟ್ರೀಯ ವಿಮಾನಯಾನವನ್ನು ಅನುಮತಿಸಲಾಗಿದೆ.

ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದಾಗಲು ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಆಪರೇಷನ್ ಟ್ರೈಡೆಂಟ್: ಭಾರತ ಏಕೆ ಡಿಸೆಂಬರ್ 4ರಂದು ನೌಕಾಪಡೆಯ ದಿನವನ್ನು ಆಚರಿಸುತ್ತದೆ?

ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ: ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ, ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

SCROLL FOR NEXT