ಅಗಲಿದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ 
ದೇಶ

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಅಗಲಿದ ವೀರ ಸೇನಾನಿಗಳಿಗೆ ತಮಿಳು ನಾಡು ಸರ್ಕಾರ ಗೌರವ, ಸಿಎಂ ಸ್ಟಾಲಿನ್ ಪುಷ್ಪ ನಮನ, ಪಾರ್ಥಿವ ಶರೀರ ದೆಹಲಿಗೆ ರವಾನೆ

ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಭೀಕರ ಮಿಲಿಟರಿ ಹೆಲಿಕಾಪ್ಟರ್ ಅಪಘಾತ ದುರಂತದಲ್ಲಿ ಮೃತಪಟ್ಟ ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿಯ ಕಳೇಬರಕ್ಕೆ ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಗೌರವ ನಮನ ಸಲ್ಲಿಸಿದರು.

ನೀಲಗಿರಿ(ತಮಿಳು ನಾಡು): ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಭೀಕರ ಮಿಲಿಟರಿ ಹೆಲಿಕಾಪ್ಟರ್ ಅಪಘಾತ ದುರಂತದಲ್ಲಿ ಮೃತಪಟ್ಟ ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿಯ ಕಳೇಬರಕ್ಕೆ ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಗೌರವ ನಮನ ಸಲ್ಲಿಸಿದರು.

ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಸಕಲ ಮಿಲಿಟರಿ ಮತ್ತು ಸರ್ಕಾರಿ ಗೌರವಗಳೊಂದಿಗೆ ಪುಷ್ಪಗಳಿಂದ ಅಲಂಕೃತ ಮಾಡಿದ್ದ ವಾಹನದಲ್ಲಿ ಮೃತರ ಕಳೇಬರವನ್ನು ಮೆರವಣಿಗೆ ಗೌರವಗಳ ಮೂಲಕ ಹೊರಗೆ ತಂದು ಇಟ್ಟು ಭಾರತದ ತ್ರಿವರ್ಣ ಧ್ವಜವನ್ನು ಹೊದಿಸಲಾಯಿತು. ನೀಲಗಿರಿಯಲ್ಲಿರುವ ಮದ್ರಾಸ್ ರೆಜಿಮೆಂಟಲ್ ಕೇಂದ್ರದಲ್ಲಿ ಇಂದು ಬೆಳಗ್ಗೆ ಸಕಲ ಮಿಲಿಟರಿ ಮತ್ತು ಸರ್ಕಾರಿ ಗೌರವಗಳೊಂದಿಗೆ ಗೌರವ ನಮನ ಸಲ್ಲಿಸಲಾಯಿತು. ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಗೌರವ ಸಲ್ಲಿಸಿದರು.

ತೆಲಂಗಾಣ ಮತ್ತು ಪುದುಚೆರಿ ರಾಜ್ಯಪಾಲೆ ಡಾ ತಮಿಳಿಸೈ ಸೌಂದರರಾಜನ್ ಸಹ ಮದ್ರಾಸ್ ರೆಜಿಮೆಂಟ್ ಗೆ ಬಂದು ಗೌರವ ನಮನ ಸಲ್ಲಿಸಿದರು. ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ರಕ್ಷಣಾ ಸಿಬ್ಬಂದಿಯ ಪಾರ್ಥಿವ ಶರೀರವನ್ನು ತಮಿಳು ನಾಡು ಸರ್ಕಾರದ ವಾಹನದಲ್ಲಿ ಕೊಂಡೊಯ್ಯಲಾಯಿತು. ಸರ್ಕಾರಿ ಗೌರವ ಸಲ್ಲಿಸಿದ ಬಳಿಕ ವೆಲ್ಲಿಂಗ್ಟನ್‌ನಲ್ಲಿರುವ ಮದ್ರಾಸ್ ರೆಜಿಮೆಂಟಲ್ ಸೆಂಟರ್‌ನಿಂದ ಪಾರ್ಥಿವ ಶರೀರಗಳನ್ನು ಕೊಯಮತ್ತೂರಿನ ಸುಲೂರ್ ಏರ್ ಬೇಸ್‌ಗೆ ಉಚಿತ ಹರ್ಸ್ ಸರ್ವೀಸ್ ವಾಹನಗಳಲ್ಲಿ ಕಳುಹಿಸುವ ಮೂಲಕ ದೆಹಲಿಗೆ ರವಾನಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT