ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಪತನಕ್ಕೀಡಾದ ನಂತರದ ದೃಶ್ಯ 
ದೇಶ

ಹೆಲಿಕಾಪ್ಟರ್ ದುರಂತ: 'ಊಹಾಪೋಹ ನಿಲ್ಲಿಸಿ.. ಮೃತರ ಘನತೆ ಕಾಪಾಡಿ'- ಐಎಎಫ್

ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ಸ್ (ಸಿಡಿಎಸ್) ಬಿಪಿನ್ ರಾವತ್ ಅವರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಊಹಾಪೋಹಗಳನ್ನು ನಿಲ್ಲಿಸಿ ಎಂದು ಭಾರತೀಯ ವಾಯುಸೇನೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ನವದೆಹಲಿ: ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ಸ್ (ಸಿಡಿಎಸ್) ಬಿಪಿನ್ ರಾವತ್ ಅವರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಊಹಾಪೋಹಗಳನ್ನು ನಿಲ್ಲಿಸಿ ಎಂದು ಭಾರತೀಯ ವಾಯುಸೇನೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್‌ ದುರಂತದ ಕುರಿತ ಊಹಾಪೋಹಗಳನ್ನು ನಿಲ್ಲಿಸಬೇಕು. ಆ ಮೂಲಕ ಮೃತರ ಘನತೆಯನ್ನು ಕಾಪಾಡುವಂತೆ ಭಾರತೀಯ ವಾಯುಸೇನೆ ಮನವಿ ಮಾಡಿದೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಭಾರತೀಯ ವಾಯುಸೇನೆ, 'ಡಿಸೆಂಬರ್ 8ರಂದು ಸಂಭವಿಸಿದ ಹೆಲಿಕಾಪ್ಟರ್ ದುರಂತದ ಕಾರಣದ ತನಿಖೆಗಾಗಿ ಭಾರತೀಯ ವಾಯುಪಡೆಯು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ರಚಿಸಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ದುರಂತಕ್ಕೆ ಕಾರಣವಾದ ಸತ್ಯವನ್ನೂ ಹೊರತರಲಾಗುತ್ತದೆ. ಅಲ್ಲಿಯವರೆಗೆ, ಮಡಿದವರ ಘನತೆಯನ್ನು ಕಾಪಾಡಲು, ಮಾಹಿತಿ ಇಲ್ಲದ ಊಹಾಪೋಹಗಳನ್ನು ತಡೆಯಬೇಕು,’ ಎಂದು ವಾಯುಪಡೆಯ ಅಧಿಕೃತ ಟ್ವಿಟರ್‌ ಖಾತೆಯ ಮೂಲಕ ಶುಕ್ರವಾರ ಟ್ವೀಟ್‌ ಮಾಡಲಾಗಿದೆ.

ತಮಿಳುನಾಡಿನ ಕೂನೂರು ಸಮೀಪ ಬುಧವಾರ ಸೇನಾ ಹೆಲಿಕಾಪ್ಟರ್‌ ಪತನಗೊಂಡ ಪ್ರಕರಣದ ತನಿಖೆಯನ್ನು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ನಡೆಸಲಿದೆ. ಏರ್‌ ಮಾರ್ಷಲ್‌ ಮಾನವೇಂದ್ರ ಸಿಂಗ್‌ ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ.

ಅಂದು ನಡೆದ ದುರಂತದಲ್ಲಿ ಸೇನಾ ಪಡೆಗಳ ಮೊದಲ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌, ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಮೃತಪಟ್ಟಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT