ಹೆಲಿಕಾಪ್ಟರ್ ಪತನ 
ದೇಶ

ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ಪತನ: ಪ್ರತ್ಯಕ್ಷದರ್ಶಿ ಪೊಲೀಸ್ ವಿಚಾರಣೆಗೆ ಹಾಜರು

ನೀಲಗಿರಿಯ ಕೂನೂರು ಬಳಿಯ ಕಾಟೇರಿ-ನಂಚಪ್ಪನಛತ್ರಂ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ರಕ್ಷಣಾ ಸಿಬ್ಬಂದಿ ಸಾವನ್ನಪ್ಪಿದ ಎರಡು...

ಕೊಯಮತ್ತೂರು: ನೀಲಗಿರಿಯ ಕೂನೂರು ಬಳಿಯ ಕಾಟೇರಿ-ನಂಚಪ್ಪನಛತ್ರಂ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ರಕ್ಷಣಾ ಸಿಬ್ಬಂದಿ ಸಾವನ್ನಪ್ಪಿದ ಎರಡು ದಿನಗಳ ನಂತರ, ಹೆಲಿಕಾಪ್ಟರ್ ಅನ್ನು ಅತ್ಯಂತ ಸಮೀಪದಿಂದ ಗಮನಿಸಿದ ಪ್ರತ್ಯಕ್ಷದರ್ಶಿಯೊಬ್ಬರು ಶುಕ್ರವಾರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರತ್ಯಕ್ಷದರ್ಶಿ ಹೆಲಿಕಾಪ್ಟರ್ ಪತನವಾಗುವ ಕೆಲ ನಿಮಿಷಗಳ ಮುನ್ನ ತಮ್ಮ ಮೊಬೈಲ್‌ನಲ್ಲಿ ಅದರ ವಿಡಿಯೋ ಮಾಡಿದ್ದಾರೆ.

"ಬುಧವಾರ ಮಧ್ಯಾಹ್ನ 12.24ಕ್ಕೆ ಹೆಲಿಕಾಪ್ಟರ್ ಕಾಟೇರಿಯನ್ನು ವೇಗವಾಗಿ ದಾಟಲು ಪ್ರಯತ್ನಿಸಿದಾಗ, ಇಡೀ ಪ್ರದೇಶವು ದಟ್ಟವಾದ ಮಂಜಿನಿಂದ ಆವೃತವಾಗಿತ್ತು" ಎಂದು ಪ್ರತ್ಯಕ್ಷದರ್ಶಿಗಳಲ್ಲಿ ಒಬ್ಬರಾದ ನಾಸರ್ ಅವರು ಹೇಳಿದ್ದಾರೆ.

“ನಾವು ಸ್ಥಳದಲ್ಲಿ ಸುಮಾರು 10 ನಿಮಿಷಗಳ ಕಾಲ ಫೋಟೋಗಳನ್ನು ತೆಗೆದುಕೊಂಡೆವು. ದೊಡ್ಡ ಸದ್ದು ಕೇಳಿದ ನಂತರ ನಾವು ತಕ್ಷಣ ಶಬ್ದ ಕೇಳಿದ ಕಡೆಗೆ ಹೋಗಲು ಪ್ರಾರಂಭಿಸಿದೆವು ಮತ್ತು ಆ ಪ್ರದೇಶದಲ್ಲಿ ಏನಾದರೂ ಅಪಘಾತ ಸಂಭವಿಸಿದೆಯೇ ಎಂದು ಹುಡುಕಿದೆವು. ಘಾಟ್ ರಸ್ತೆಯಲ್ಲಿ ಕೆಲವು ತಿರುವುಗಳನ್ನು ದಾಟಿದ ನಂತರ, ನಾವು ಒಂದು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಪೊಲೀಸರು ಮತ್ತು ಆಂಬ್ಯುಲೆನ್ಸ್ ಅನ್ನು ನೋಡಿದ್ದೇವೆ. ನಾವು ಅವರ ಬಳಿಗೆ ಹೋಗಿ ನಾವು ಮಾಡಿದ ವಿಡಿಯೋವನ್ನು ಪೊಲೀಸರಿಗೆ ಒಪ್ಪಿಸಿದೆವು. ನಂತರ ಅಲ್ಲಿಂದ ಹೊರಡುವಂತೆ ನಮಗೆ ಸೂಚಿಸಿದ್ದರಿಂದ ನಾವು ಹೊರಟೆವು” ಎಂದು ಅವರು ತಿಳಿಸಿದ್ದಾರೆ.

ಐಎಎಫ್ ಹೆಲಿಕಾಪ್ಟರ್‌ನ ಕೊನೆಯ ಕ್ಷಣಗಳನ್ನು ಕೊಯಮತ್ತೂರಿನ ಕುಟ್ಟಿ ಎಂಬ ವ್ಯಕ್ತಿ 19 ಸೆಕೆಂಡ್‌ಗಳ ವಿಡಿಯೋದಲ್ಲಿ ರೆಕಾರ್ಡ್ ಮಾಡಿದ್ದಾರೆ. ಕೊಯಮತ್ತೂರಿನ ಗಾಂಧಿಪುರಂನಲ್ಲಿ ಪ್ರಿಂಟಿಂಗ್ ಪ್ರೆಸ್ ನಡೆಸುತ್ತಿರುವ ನಾಸರ್ ಜೊತೆಗೆ ಕುಟ್ಟಿ ಮತ್ತು ಅವರ ಕುಟುಂಬ ಬುಧವಾರ ಕೂನೂರು ಬಳಿಯ ಕಾಟೇರಿಯಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತವನ್ನು ಗಮನಿಸಿದ್ದಾರೆ.

ದಟ್ಟ ಮಂಜಿನಲ್ಲಿ ಹೆಲಿಕಾಪ್ಟರ್ ಕಣ್ಮರೆಯಾದ ನಂತರ ಈ ಕುಟುಂಬವು ಕಾಟೇರಿ ಬಳಿ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿರುವುದು ವೀಡಿಯೋದಲ್ಲಿ ಸೇರೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT