ಸಾಂದರ್ಭಿಕ ಚಿತ್ರ 
ದೇಶ

ಹೆಂಡತಿ ಮೇಲೆ ಅನುಮಾನ: ರುಂಡವನ್ನೇ ಕತ್ತರಿಸಿದ ಪಾಪಿ ಪತಿ!

ಹೆಂಡತಿ ಮೇಲೆ ಅನುಮಾನಪಟ್ಟ ಪತಿಯೊಬ್ಬ, ರಾತ್ರಿ ನಿಧಿಸುವ ಸಮಯದಲ್ಲಿ ಪತ್ನಿಯನ್ನು ಅಮಾನುಷವಾಗಿ ಕೊಂದು ದೇಹದಿಂದ ತಲೆಯನ್ನು ಬೇರ್ಪಡಿಸಿ ತುಂಡರಿಸಿದ ಘಟನೆ ಹೈದರಾಬಾದಿನ ರಾಜೇಂದ್ರ ನಗರದಲ್ಲಿ ನಡೆದಿದೆ. ನಂತರ ಆರೋಪಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಹೈದರಾಬಾದ್: ಹೆಂಡತಿ ಮೇಲೆ ಅನುಮಾನಪಟ್ಟ ಪತಿಯೊಬ್ಬ, ರಾತ್ರಿ ನಿಧಿಸುವ ಸಮಯದಲ್ಲಿ ಪತ್ನಿಯನ್ನು ಅಮಾನುಷವಾಗಿ ಕೊಂದು ದೇಹದಿಂದ ತಲೆಯನ್ನು ಬೇರ್ಪಡಿಸಿ ತುಂಡರಿಸಿದ ಘಟನೆ ಹೈದರಾಬಾದಿನ ರಾಜೇಂದ್ರ ನಗರದಲ್ಲಿ ನಡೆದಿದೆ. ನಂತರ ಆರೋಪಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಘಟನೆ ಹಿನ್ನೆಲೆ: 14 ವರ್ಷಗಳ ಹಿಂದೆ ಸಮ್ರಿನ್ ಬೇಗಂ ಎನ್ನುವ ಯುವತಿಯನ್ನು ಆರೋಪಿ ಫರ್ವೇಜ್ ವಿವಾಹವಾಗಿದ್ದ. ಆದರೆ, ಗಂಡನ ಹಿಂಸೆ ತಾಳಲಾಗದೆ ಸಮ್ರಿನ್ ಬೇಗಂ ಈ ಮೊದಲೇ ವಿಚ್ಚೇದನ ಪಡೆದು ಬೇರೆಯಾಗಿದ್ದರು. ಈ ನಡುವೆ ಕಳೆದ ವರ್ಷ ಇಬ್ಬರೂ ಬಾಳಬೇಕೆಂದು ನಿರ್ಧರಿಸಿ ಪುನ: ಮದುವೆ ಮಾಡಿಕೊಂಡಿದ್ದರು. ಅಂದಿನಿಂದಲೂ ಹೆಂಡತಿ ಮೇಲೆ ಅನುಮಾನ ಶುರುವಾಗಿತ್ತು.

ಇದೇ ವಿಚಾರವಾಗಿ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಲೇ ಇತ್ತು. ಆದರೆ, ಇಂದು ಬೆಳಿಗ್ಗೆ 4 ಗಂಟೆಗೆ ಮನೆಗೆ ಹೋದ ಫರ್ವೇಜ್ ಹೆಂಡತಿ ನಿದ್ರೆಯಲ್ಲಿದ್ದ ವೇಳೆ ಕತ್ತಿಯಿಂದ ದಾಳಿ ಮಾಡಿದ್ದಾನೆ. ಇಷ್ಟಕ್ಕೆ ಆತನ ಕೋಪ ತೀರದೆ ಆಕೆಯ ದೇಹದಿಂದ ತಲೆಯನ್ನು ಬೇರ್ಪಡಿಸಿ, ಪಕ್ಕದಲ್ಲೇ ಇದ್ದ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಹೆಂಡತಿ ಮೇಲಿನ ಅನುಮಾನದಿಂದ ಈ ರೀತಿ ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿ ಹೇಳಿದ್ದಾನೆ. ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT