ನಿರ್ದೇಶಕ ಅಲಿ ಅಕ್ಬರ್ 
ದೇಶ

ರಿಜ್ವಿ ಬಳಿಕ ಇಸ್ಲಾಮ್ ತೊರೆದು ಹಿಂದೂ ಧರ್ಮ ಸ್ವೀಕರಿಸಲು ಮುಂದಾದ ಖ್ಯಾತ ನಿರ್ದೇಶಕ ಅಲಿ ಅಕ್ಬರ್; ಕಾರಣ ಹೀಗಿದೆ..

ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಇತ್ತೀಚೆಗೆ ಇಸ್ಲಾಮ್ ತೊರೆದು ಸನಾತನ ಧರ್ಮಾನುಯಾಗಿ ಪರ್ವರ್ತನೆಗೊಂಡಿದ್ದರು. ಈಗ ಅದೇ ಹಾದಿಯಲ್ಲಿದ್ದಾರೆ ಖ್ಯಾತ ನಿರ್ದೇಶಕ ಅಲಿ ಅಕ್ಬರ್.

ತಿರುವನಂತಪುರಂ: ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಇತ್ತೀಚೆಗೆ ಇಸ್ಲಾಮ್ ತೊರೆದು ಸನಾತನ ಧರ್ಮಾನುಯಾಗಿ ಪರ್ವರ್ತನೆಗೊಂಡಿದ್ದರು. ಈಗ ಅದೇ ಹಾದಿಯಲ್ಲಿದ್ದಾರೆ ಖ್ಯಾತ ನಿರ್ದೇಶಕ ಅಲಿ ಅಕ್ಬರ್.

ಅಲಿ ಅಕ್ಬರ್ ಅವರ ಈ ನಿರ್ಧಾರಕ್ಕೆ ಕಾರಣ ಸಿಡಿಎಸ್ ಬಿಪಿನ್ ರಾವತ್ ಅವರ ದುರ್ಮರಣಕ್ಕೆ ಕೆಲವು ಮುಸ್ಲಿಮರು ಸಂತಸ, ನಗುವಿನ ಎಮೋಜಿ ಹಾಕಿ ಸಂಭ್ರಮಿಸಿರುವುದಾಗಿದೆ. 

ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದ್ದ ದೇಶವಿರೋಧಿ ಮುಸ್ಲಿಮರ ನಡೆಯನ್ನು ಸಮುದಾಯದ ಯಾವುದೇ ಓರ್ವ ನಾಯಕನೂ ಖಂಡಿಸಿಲ್ಲ. ಆದ್ದರಿಂದ ಇಸ್ಲಾಮ್ ಧರ್ಮದಲ್ಲಿ ನನಗೆ ನಂಬಿಕೆ ಹೋಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ವಿಡಿಯೋ ಮೂಲಕ ತಿಳಿಸಿದ್ದಾರೆ.

ಅಲಿ ಅವರಿಗೆ ಹಲವಾರು ಮುಸ್ಲಿಮರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಇತ್ತೀಚೀನ ಮಾಹಿತಿಯ ಪ್ರಕಾರ ಆ ವಿಡಿಯೋ ಸಾಮಾಜಿಕ ಜಾಲತಾಣದಿಂದ ಕಾಣೆಯಾಗಿದೆ ಆದರೆ ವಾಟ್ಸ್ ಆಪ್ ಗಳಲ್ಲಿ ವೈರಲ್ ಆಗತೊಡಗಿದೆ. 

ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ನಿಧನವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಲಿ ಅಕ್ಬರ್ ವಿಡಿಯೋದಲ್ಲಿ ಆಗ್ರಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT