ತಮಿಳು ನಾಡಿನ ಕೂನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಚಿತ್ರ 
ದೇಶ

ಸೇನಾ ಹೆಲಿಕಾಪ್ಟರ್ ದುರಂತ: 11 ಅಧಿಕಾರಿಗಳ ಮೃತದೇಹ ಗುರುತು ಪತ್ತೆ, ಇನ್ನಿಬ್ಬರ ಗುರುತು ಪತ್ತೆಗೆ ಡಿಎನ್ ಎ ಪರೀಕ್ಷೆ

ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ನಾಲ್ವರು ಭಾರತೀಯ ವಾಯುಪಡೆಯ ಸಿಬ್ಬಂದಿ ಗುರುತು ಪತ್ತೆ ಕಾರ್ಯ ಪೂರ್ಣವಾಗಿದೆ. ಇನ್ನು ಇಬ್ಬರ ಗುರುತು ಪತ್ತೆ ಕಾರ್ಯ ಆಗಬೇಕಿದ್ದು ಮೃತದೇಹಗಳ ಡಿಎನ್ ಎ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಮೂಲಕ ಇದುವರೆಗೆ 11 ಮಂದಿಯ ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ.

ನವದೆಹಲಿ: ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ನಾಲ್ವರು ಭಾರತೀಯ ವಾಯುಪಡೆಯ ಸಿಬ್ಬಂದಿ ಗುರುತು ಪತ್ತೆ ಕಾರ್ಯ ಪೂರ್ಣವಾಗಿದೆ. ಇನ್ನು ಇಬ್ಬರ ಗುರುತು ಪತ್ತೆ ಕಾರ್ಯ ಆಗಬೇಕಿದ್ದು ಮೃತದೇಹಗಳ ಡಿಎನ್ ಎ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಮೂಲಕ ಇದುವರೆಗೆ 11 ಮಂದಿಯ ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ.

ಗುರುತು ಪತ್ತೆ ಹಚ್ಚಿದ ಮೃತಪಟ್ಟ ವಾಯುಪಡೆ ಅಧಿಕಾರಿಗಳನ್ನು ಜೆಡಬ್ಲ್ಯುಒ ಪ್ರದೀಪ್ ಎ, ವಿಂಗ್ ಕಮಾಂಡರ್ ಪಿ ಎಸ್ ಚೌಹಾನ್, ಜೆಡಬ್ಲ್ಯುಒ ರಾಣಾ ಪ್ರತಾಪ್ ದಾಸ್ ಮತ್ತು ಸ್ಕ್ರ್ವಾಡ್ರ್ ಲೀಡರ್ ಕುಲದೀಪ್ ಸಿಂಗ್ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ಕೂನೂರು ಸಮೀಪ ಮೊನ್ನೆ ಬುಧವಾರ ಸೇನಾ ಹೆಲಿಕಾಪ್ಟರ್‌ ಪತನಗೊಂಡ ಪ್ರಕರಣದ ತನಿಖೆಯನ್ನು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ನಡೆಸಲಿದೆ. ಏರ್‌ ಮಾರ್ಷಲ್‌ ಮನ್ವೇಂದ್ರ ಸಿಂಗ್‌ ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ.

ಅಂದು ನಡೆದ ದುರಂತದಲ್ಲಿ ರಕ್ಷಣಾ ಪಡೆ ಮೊದಲ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌, ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!