ವಿಮ್ಯಾಕ್ಸ್ ಸ್ಪೈಸ್ ಜೆಟ್ ವಿಮಾನ 
ದೇಶ

ಎಂಜಿನ್ ದೋಷದಿಂದ ಮಾಡಿದ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ: ತನಿಖೆಗೆ ಆದೇಶಿಸಿದ ಡಿಜಿಸಿಎ

ಎರಡೂವರೆ ವರ್ಷಗಳ ಕಾಲ ಸ್ಥಗಿತಗೊಂಡಿದ್ದ ವಿಮಾನಯಾನ ಕ್ಷೇತ್ರ ಸಹಜ ಸ್ಥಿತಿಗೆ ಮರಳುತ್ತಿರುವ ಸಮಯದಲ್ಲೇ ಈ ಪ್ರಕರಣ ನಡೆದಿರುವುದು ಆತಂಕಕ್ಕೆ ಕಾರಣವಾಗಿತ್ತು.  

ನವದೆಹಲಿ: ನಾಗರಿಕ ವಿಮಾನಯಾನ ನಿಯಂತ್ರಕ ನಿರ್ದೇಶನಾಲಯ (ಡಿಜಿಸಿಎ) ತುರ್ತು ಭೂಸ್ಪರ್ಶ ಮಾಡಿದ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಪ್ರಕರಣದ ತನಿಖೆಗೆ ಆದೇಶ ನೀಡಿದೆ. 

ಗುರುವಾರ ಸ್ಪೈಸ್ ಜೆಟ್ ನ ವಿಮಾನ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಬೋಯಿಂಗ್ ಸಂಸ್ಥೆಯ ವಿಮ್ಯಾಕ್ಸ್ ಎನ್ನುವ ಸರಣಿಗೆ ಸೇರಿದ ಈ ವಿಮಾನದ ಎಂಜಿನ್ ನಲ್ಲಿ ದೋಷ ಕಾಣಿಸಿಕೊಂಡಿತ್ತು. 

ಕೊರೊನಾ ಹಿನ್ನೆಲೆಯಲ್ಲಿ ಎರಡೂವರೆ ವರ್ಷಗಳ ಕಾಲ ಸ್ಥಗಿತಗೊಂಡಿದ್ದ ವಿಮಾನಯಾನ ಕ್ಷೇತ್ರ ಸಹಜ ಸ್ಥಿತಿಗೆ ಮರಳುತ್ತಿರುವ ಸಮಯದಲ್ಲೇ ಈ ಪ್ರಕರಣ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.  

ವಿವಾದಕ್ಕೆ ಕಾರಣವಾಗಿರುವ ವಿಮ್ಯಾಕ್ಸ್ ಸರಣಿಯ ವಿಮಾನ ಶೇ.20 ರಷ್ಟು ಇಂಧನ ಉಳಿಸುತ್ತದೆ ಎಂದು ಸ್ಪೈಸ್ ಜೆಟ್ ಈ ಹಿಂದೆ ಹೇಳಿಕೊಂಡಿತ್ತು. ಈ ವಿಮಾನ ಸರಣಿಯಿಂದಾಗಿ ದೇಶೀಯ ವಿಮಾನಯಾನ ಕ್ಷೇತ್ರದಲ್ಲಿ ಕ್ರಾಂತಿ ಉಂಟಾಗುವುದಾಗಿ ಸಂಸ್ಥೆ ಅಭಿಪ್ರಾಯಪಟ್ಟಿತ್ತು. 

ಇದೀಗ ಪ್ರಕರಣದ ತನಿಖೆಗೆ ಆದೇಶ ನೀಡಿರುವ ಡಿಜಿಸಿಎ ವಿಮಾನ ನಿರ್ಮಾತೃ ಸಂಸ್ಥೆ ಬೋಯಿಂಗ್ ಮತ್ತು ಎಂಜಿನ್ ತಯಾರಕ ಸಂಸ್ಥೆಯನ್ನೂ ವಿಚಾರಣೆಯಲ್ಲಿ ಪಾಲ್ಗೊಳ್ಳುವಂತೆ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಧಾನಸೌಧದಲ್ಲಿ 'ಫ್ರೀಡಂ ಹಬ್ಬ: ಈ ಮೂರು ನಿಲ್ದಾಣದಲ್ಲಿ ಮೆಟ್ರೋ ನಿಲುಗಡೆ ಇಲ್ಲ!

ತಂದೆ ಎಲ್ಲಿದ್ದಾರೆ ಅಂತ ತಾಯಿನ ಕೇಳಿ; ವಿಧಾನಸಭೆಯಲ್ಲಿ ಹುಡುಕಬೇಡಿ; CM Vijay ಬಗ್ಗೆ ಬಿಜೆಪಿ ಅಧ್ಯಕ್ಷರ ಹೇಳಿಕೆ ವಿವಾದಕ್ಕೆ ಗುರಿ!

Hockey World Cup 2026: ಸ್ವಾತಂತ್ರ್ಯ ದಿನಾಚರಣೆಯಂದೇ ಭಾರತ ಶುಭಾರಂಭ, ವೇಲ್ಸ್ ವಿರುದ್ಧ 3-1 ಅಂತರದ ಭರ್ಜರಿ ಜಯ

India vs Sri Lanka 1st Test: ಕನ್ನಡಿಗರ ಅರ್ಭಟ, ಪಡಿಕ್ಕಲ್ ಚೊಚ್ಚಲ ಶತಕ, ರಾಹುಲ್ ಅರ್ಧಶತಕದೊಂದಿಗೆ ಭಾರತಕ್ಕೆ ಮೇಲುಗೈ!

‘ಯುವಕರು ದೇಶದ ಡೆಮೋಗ್ರಾಫಿಕ್ ಡಿವಿಡೆಂಡ್, ಯುವಶಕ್ತಿಯ ಸರಿಯಾಗಿ ಬಳಸಿದರೆ ದೇಶಕ್ಕೆ ಅಪಾರ ಲಾಭ': Mohan Bhagwat