ಅಸಾದುದ್ದೀನ್ ಒವೈಸಿ 
ದೇಶ

ನನ್ನ ಬಾಬ್ರಿ ಮಸೀದಿ ಹುತಾತ್ಮವಾಗಿದೆ, ಈ ಬಗ್ಗೆ SP, BSP, Congress ಒಂದೂ ಮಾತನಾಡಲಿಲ್ಲ ಏಕೆ?: ವಿಪಕ್ಷಗಳ ವಿರುದ್ಧ ಒವೈಸಿ ಕಿಡಿ

ನನ್ನ ಬಾಬ್ರಿ ಮಸೀದಿ ಹುತಾತ್ಮವಾಗಿದೆ.. ಆದರೆ ಈ ಬಗ್ಗೆ ಜ್ಯಾತ್ಯಾತೀತ ಪಕ್ಷಗಳು ಎಂದು ಹೇಳಿಕೊಳ್ಳುವ ಸಮಾಜವಾದಿ (SP), ಬಹುಜನ ಸಮಾಜವಾದಿ (BSP) ಮತ್ತು ಕಾಂಗ್ರೆಸ್ (Congress) ಪಕ್ಷಗಳೂ ಒಂದೂ ಮಾತನಾಡಲಿಲ್ಲ ಏಕೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.

ಕಾನ್ಪುರ: ನನ್ನ ಬಾಬ್ರಿ ಮಸೀದಿ ಹುತಾತ್ಮವಾಗಿದೆ.. ಆದರೆ ಈ ಬಗ್ಗೆ ಜ್ಯಾತ್ಯಾತೀತ ಪಕ್ಷಗಳು ಎಂದು ಹೇಳಿಕೊಳ್ಳುವ ಸಮಾಜವಾದಿ (SP), ಬಹುಜನ ಸಮಾಜವಾದಿ (BSP) ಮತ್ತು ಕಾಂಗ್ರೆಸ್ (Congress) ಪಕ್ಷಗಳೂ ಒಂದೂ ಮಾತನಾಡಲಿಲ್ಲ ಏಕೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.

ಕಾನ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಒವೈಸಿ, 'ನನ್ನ ಬಾಬ್ರಿ ಮಸೀದಿ ಹುತಾತ್ಮವಾಯಿತು. ಅದನ್ನು ಕಳಂಕಗೊಳಿಸಿದ ಜನರು ಭಾರತದ ಅಡಿಪಾಯ ಮತ್ತು ಕಾನೂನಿನ ಆಳ್ವಿಕೆಗೆ ಅಡ್ಡಿಪಡಿಸಿದರು. ಆದರೆ ಈ ಬಗ್ಗೆ ಜಾತ್ಯಾತೀತ ಪಕ್ಷಗಳು ಎಂದು ಹೇಳಿಕೊಳ್ಳುವ ಸಮಾಜವಾದಿ (SP), ಬಹುಜನ ಸಮಾಜವಾದಿ (BSP) ಮತ್ತು ಕಾಂಗ್ರೆಸ್ (Congress) ಪಕ್ಷಗಳೂ ಒಂದೂ ಮಾತನಾಡಲಿಲ್ಲ. ಎಲ್ಲಿಯಾದರೂ ಈ ಬಗ್ಗೆ ಒಂದೇ ಒಂದು ಮಾತನ್ನಾದರೂ ಹೇಳಿದ್ದಾರೆಯೇ ಅವರು..? ಅದು ನನ್ನ ಮಸೀದಿಗೆ ಆದ ಕಳಂಕವೇ ಹೊರತು ಅವರದ್ದಲ್ಲ ಎಂದು ಅವರು ಕಣ್ಣು ಮುಚ್ಚಿ ಕುಳಿತಿದ್ದರು ಎಂದು ಕಿಡಿಕಾರಿದ್ದಾರೆ.

ಅಂತೆಯೇ ಬಾಬ್ರಿ ಮಸೀದಿ ಧ್ವಂಸದ ವಿಚಾರವಾಗಿ ಬಂದ ತೀರ್ಪಿನ ಕುರಿತು ನಾನು ಸಾಕಷ್ಟು ಬಾರಿ ಮಾತನಾಡಿದ್ದೇನೆ. ಬಾಬರಿ ಮಸೀದಿ ತೀರ್ಪಿನಲ್ಲಿ ಯಾವುದೇ ಅಪರಾಧಿ ಇಲ್ಲ ಎಂದು ಹೇಳಿದ ನಂತರ, ನಾನು ಸಂಸತ್ತಿನಲ್ಲಿ ಸಿಬಿಐ ಏಕೆ ಮೇಲ್ಮನವಿ ಸಲ್ಲಿಸಲಿಲ್ಲ ಮತ್ತು ಮಸೀದಿಗೆ ಕಳಂಕ ತಂದವರು ಯಾರು ಎಂದು ಕೇಳಿದೆ. ಈ ಬಗ್ಗೆ ಎಸ್‌ಪಿ, ಬಿಎಸ್‌ಪಿ ಅಥವಾ ಕಾಂಗ್ರೆಸ್‌ನ ಯಾರಾದರೂ ನಾಯಕರು ಏನಾದರೂ ಹೇಳಿದ್ದೀರಾ? ಎಂದು ಒವೈಸಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT