ಎಎಫ್ಎಸ್ ಪಿಎ ವಿರೋಧಿಸಿ ಪ್ರತಿಭಟನೆ 
ದೇಶ

ನಾಗಾಲ್ಯಾಂಡ್: ಮೊದಲು ನ್ಯಾಯ ಸಿಗಲಿ ಆ ನಂತರ ಪರಿಹಾರ ಸ್ವೀಕರಿಸುತ್ತೇವೆ; ಸೇನೆಯಿಂದ ಹತರಾದವರ ಕುಟುಂಬಗಳ ಒತ್ತಾಯ

ನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಹತ್ಯೆಗೀಡಾದ ವ್ಯಕ್ತಿಗಳ ಕುಟುಂಬ ಸದಸ್ಯರು ಸರ್ಕಾರ ನೀಡಲು ಮುಂದಾಗಿರುವ ಪರಿಹಾರ ಹಣವನ್ನು ನಿರಾಕರಿಸಿದ್ದಾರೆ. 

ಗುವಾಹಟಿ: ನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಹತ್ಯೆಗೀಡಾದ ವ್ಯಕ್ತಿಗಳ ಕುಟುಂಬ ಸದಸ್ಯರು ಸರ್ಕಾರ ನೀಡಲು ಮುಂದಾಗಿರುವ ಪರಿಹಾರ ಹಣವನ್ನು ನಿರಾಕರಿಸಿದ್ದಾರೆ. 

"ನಮ್ಮ ಕುಟುಂಬ ಸದಸ್ಯರ ಸಾವಿಗೆ ಕಾರಣರಾದ 21 ಪ್ಯಾರಾ ಕಮಾಂಡೋಗಳನ್ನು ಶಿಕ್ಷಿಸಿ, ಈಶಾನ್ಯ ರಾಜ್ಯಗಳಲ್ಲಿ ಸೇನಾ ಪಡೆಗಳಿಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ಹಿಂಪಡೆಯುವವರೆಗೂ ಪರಿಹಾರವನ್ನು ಸ್ವೀಕರಿಸುವುದಿಲ್ಲ" ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. 

ನಾಗಾಲ್ಯಾಂಡ್ ನ ಸಿಎಂ ರಾಜ್ಯ ಸರ್ಕಾರದಿಂದ, ಮೃತರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಕೇಂದ್ರ ಸರ್ಕಾರ ಸಂತ್ರಸ್ತರ ಕುಟುಂಬಕ್ಕೆ ತಲಾ 11 ಲಕ್ಷ ರೂಪಾಯಿ ಹಾಗೂ ಉದ್ಯೋಗವನ್ನು ನೀಡುವ ಘೋಷಣೆ ಮಾಡಿತ್ತು. 

ಒಟಿಂಗ್ ಗ್ರಾಮ ಪರಿಷತ್ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಡಿ. 5 ರಂದು ಗ್ರಾಮದ ಜನತೆ ಕುಟುಂಬ ಸದಸ್ಯರ ಮರಣೋತ್ತರ ಪರೀಕ್ಷೆ, ಅಂತ್ಯಕ್ರಿಯೆಯ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದಾಗ ಸಚಿವ ಹಾಗೂ ಜಿಲ್ಲಾಧಿಕಾರಿಗಳು 18.30 ಲಕ್ಷ ರೂಪಾಯಿಗಳನ್ನು ನೀಡಲು ಮುಂದಾಗಿದ್ದರು. ಅದನ್ನು ಅವರು ಸಾವನ್ನಪ್ಪಿರುವವರ ಕುಟುಂಬ ಸದಸ್ಯರಿಗೆ ಮುಂಗಡವಾಗಿ ಅಥವಾ ಕಂತಿನಲ್ಲಿ ನೀಡುತ್ತಿದ್ದ ಹಣ ಎಂಬುದು ನಮಗೆ ಬಳಿಕ ತಿಳಿಯಿತು ಎಂದು ಗ್ರಾಮ ಪರಿಷತ್ ಅಸಮಾಧಾನ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT