ಎಎಫ್ಎಸ್ ಪಿಎ ವಿರೋಧಿಸಿ ಪ್ರತಿಭಟನೆ 
ದೇಶ

ನಾಗಾಲ್ಯಾಂಡ್: ಮೊದಲು ನ್ಯಾಯ ಸಿಗಲಿ ಆ ನಂತರ ಪರಿಹಾರ ಸ್ವೀಕರಿಸುತ್ತೇವೆ; ಸೇನೆಯಿಂದ ಹತರಾದವರ ಕುಟುಂಬಗಳ ಒತ್ತಾಯ

ನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಹತ್ಯೆಗೀಡಾದ ವ್ಯಕ್ತಿಗಳ ಕುಟುಂಬ ಸದಸ್ಯರು ಸರ್ಕಾರ ನೀಡಲು ಮುಂದಾಗಿರುವ ಪರಿಹಾರ ಹಣವನ್ನು ನಿರಾಕರಿಸಿದ್ದಾರೆ. 

ಗುವಾಹಟಿ: ನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಹತ್ಯೆಗೀಡಾದ ವ್ಯಕ್ತಿಗಳ ಕುಟುಂಬ ಸದಸ್ಯರು ಸರ್ಕಾರ ನೀಡಲು ಮುಂದಾಗಿರುವ ಪರಿಹಾರ ಹಣವನ್ನು ನಿರಾಕರಿಸಿದ್ದಾರೆ. 

"ನಮ್ಮ ಕುಟುಂಬ ಸದಸ್ಯರ ಸಾವಿಗೆ ಕಾರಣರಾದ 21 ಪ್ಯಾರಾ ಕಮಾಂಡೋಗಳನ್ನು ಶಿಕ್ಷಿಸಿ, ಈಶಾನ್ಯ ರಾಜ್ಯಗಳಲ್ಲಿ ಸೇನಾ ಪಡೆಗಳಿಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ಹಿಂಪಡೆಯುವವರೆಗೂ ಪರಿಹಾರವನ್ನು ಸ್ವೀಕರಿಸುವುದಿಲ್ಲ" ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. 

ನಾಗಾಲ್ಯಾಂಡ್ ನ ಸಿಎಂ ರಾಜ್ಯ ಸರ್ಕಾರದಿಂದ, ಮೃತರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಕೇಂದ್ರ ಸರ್ಕಾರ ಸಂತ್ರಸ್ತರ ಕುಟುಂಬಕ್ಕೆ ತಲಾ 11 ಲಕ್ಷ ರೂಪಾಯಿ ಹಾಗೂ ಉದ್ಯೋಗವನ್ನು ನೀಡುವ ಘೋಷಣೆ ಮಾಡಿತ್ತು. 

ಒಟಿಂಗ್ ಗ್ರಾಮ ಪರಿಷತ್ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಡಿ. 5 ರಂದು ಗ್ರಾಮದ ಜನತೆ ಕುಟುಂಬ ಸದಸ್ಯರ ಮರಣೋತ್ತರ ಪರೀಕ್ಷೆ, ಅಂತ್ಯಕ್ರಿಯೆಯ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದಾಗ ಸಚಿವ ಹಾಗೂ ಜಿಲ್ಲಾಧಿಕಾರಿಗಳು 18.30 ಲಕ್ಷ ರೂಪಾಯಿಗಳನ್ನು ನೀಡಲು ಮುಂದಾಗಿದ್ದರು. ಅದನ್ನು ಅವರು ಸಾವನ್ನಪ್ಪಿರುವವರ ಕುಟುಂಬ ಸದಸ್ಯರಿಗೆ ಮುಂಗಡವಾಗಿ ಅಥವಾ ಕಂತಿನಲ್ಲಿ ನೀಡುತ್ತಿದ್ದ ಹಣ ಎಂಬುದು ನಮಗೆ ಬಳಿಕ ತಿಳಿಯಿತು ಎಂದು ಗ್ರಾಮ ಪರಿಷತ್ ಅಸಮಾಧಾನ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT