ಸುಬ್ರಮಣಿಯನ್ ಸ್ವಾಮಿ 
ದೇಶ

ಪ್ರಧಾನಿ ಮತ್ತು ಹಣಕಾಸು ಸಚಿವರಿಗೆ ಅರ್ಥಶಾಸ್ತ್ರದ ಅರಿವಿಲ್ಲ: ಸುಬ್ರಮಣಿಯನ್ ಸ್ವಾಮಿ

ಪ್ರಧಾನ‌ಮಂತ್ರಿ ಮತ್ತು ವಿತ್ತ ಸಚಿವರಿಗೆ ಅರ್ಥಶಾಸ್ತ್ರದ ಬಗ್ಗೆ ಅರಿವಿಲ್ಲ ಎನ್ನುವ ಮೂಲಕ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸಿದ್ದಾರೆ.

ಮಥುರಾ: ಪ್ರಧಾನ‌ಮಂತ್ರಿ ಮತ್ತು ವಿತ್ತ ಸಚಿವರಿಗೆ ಅರ್ಥಶಾಸ್ತ್ರದ ಬಗ್ಗೆ ಅರಿವಿಲ್ಲ ಎನ್ನುವ ಮೂಲಕ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿನ ಬೆಲೆ ಏರಿಕೆಗೆ ಕೇಂದ್ರ ಹಣಕಾಸು ಸಚಿವರೇ ಹೊಣೆಯಾಗಿದ್ದಾರೆ. 'ಸರ್ಕಾರಕ್ಕೆ ಅರ್ಥಶಾಸ್ತ್ರವು ಅರ್ಥವಾಗುತ್ತಿಲ್ಲ. ಈ ಬಗ್ಗೆ ಪ್ರಧಾನಿ ಅಥವಾ ಹಣಕಾಸು ಸಚಿವರಿಗೆ ತಿಳಿದಿಲ್ಲ. ಈ ವಿಚಾರವಾಗಿ ಅವರು ಯಾರ ಬಳಿಯಲ್ಲೂ ಸಮಾಲೋಚನೆ ನಡೆಸುವುದಿಲ್ಲ. ಬೆಳವಣಿಗೆ ದರ ಕುಸಿದಾಗ ಏನು ಮಾಡಬೇಕೆಂದು ಕೂಡ ಅವರಿಗೆ ತಿಳಿದಿಲ್ಲ' ಎಂದು ವ್ಯಂಗ್ಯವಾಡಿದ್ದಾರೆ.

ಕೆಲವು ಹಿಂದೂ ಸಂಘಟನೆಗಳ ಪ್ರಕಾರ ಈಗ ಮಸೀದಿಗಳು ಇರುವ ಸ್ಥಳಗಳಲ್ಲಿ ಹಿಂದೂ ದೇವಾಲಯಗಳು ಇದ್ದವು, 'ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ, 1991 ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಮೊಕದ್ದಮೆಗೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ' ಎಂದು ಹೇಳಿದರು.

1991ರ ಕಾಯ್ದೆಯ ಪ್ರಕಾರ ಧಾರ್ಮಿಕ ಸ್ಥಳಗಳನ್ನು ಹಿಂಪಡೆಯಲು ಅಥವಾ ಸ್ವರೂಪದಲ್ಲಿ ಬದಲಾವಣೆ ಮಾಡಲು ಮೊಕದ್ದಮೆಯನ್ನು ಸಲ್ಲಿಸುವುದಕ್ಕೆ ಅವಕಾಶವಿಲ್ಲ. ಆಗಸ್ಟ್ 15, 1947 ರಿಂದ ಚಾಲ್ತಿಯಲ್ಲಿದ್ದ ಸ್ವರೂಪದಲ್ಲೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಾಯ್ದೆ ಹೇಳುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!