ಸಾಯಿ ಕಿರಣ್ ರೆಡ್ಡಿ 
ದೇಶ

ಯೋಧ ನಾಪತ್ತೆ: ಶೋಧ ಕಾರ್ಯಾಚರಣೆಗಾಗಿ 3 ತಂಡಗಳ ರಚನೆ

ಸಾಯಿ ಕಿರಣ್ ರೆಡ್ಡಿ ಎಂಬ ಯೋಧ ಮೂರು ವಾರಗಳ ರಜೆ ಮುಗಿಸಿ, ಈ ತಿಂಗಳ ಆರಂಭದಲ್ಲಿ ಪಂಜಾಬ್ ಗಡಿಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಮರಳುತ್ತಿದ್ದಾಗ ನಾಪತ್ತೆಯಾಗಿದ್ದಾರೆ.

ಹೈದರಾಬಾದ್: ಸಾಯಿ ಕಿರಣ್ ರೆಡ್ಡಿ ಎಂಬ ಯೋಧ ಮೂರು ವಾರಗಳ ರಜೆ ಮುಗಿಸಿ, ಈ ತಿಂಗಳ ಆರಂಭದಲ್ಲಿ ಪಂಜಾಬ್ ಗಡಿಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಮರಳುತ್ತಿದ್ದಾಗ ನಾಪತ್ತೆಯಾಗಿದ್ದಾರೆ.

ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಚೆರ್ಯಾಲ ಮಂಡಲದ ಪೋತಿರೆಡ್ಡಿಪಲ್ಲಿ ನಿವಾಸಿಯಾಗಿರುವ ಸಾಯಿ ಕಿರಣ್ ರೆಡ್ಡಿ ಅವರು ನವೆಂಬರ್ 16 ರಿಂದ ಮೂರು ವಾರಗಳ ರಜೆಯನ್ನು ಮುಗಿಸಿ, ಫರೀದ್‌ಕೋಟ್‌ನಲ್ಲಿರುವ ತಮ್ಮ ನಿಯೋಜನೆ ಕೇಂದ್ರಕ್ಕೆ ವರದಿ ಮಾಡಲು ಹೊರಟಿದ್ದರು.

ಡಿಸೆಂಬರ್ 7 ರಂದು ರೆಡ್ಡಿ ಕರ್ತವ್ಯಕ್ಕೆ ಹಾಜರಾಗದ ಕಾರಣ ಹಿರಿಯ ಅಧಿಕಾರಿಗಳು ಅವರ ಪೋಷಕರಿಗೆ ಕರೆ ಮಾಡಿದ್ದಾರೆ. ಆದರೆ ಪೋಷಕರು ಡಿ. 5 ರಂದು ಆತ ಪಂಜಾಬ್‌ಗೆ ಹೋರಟಿದ್ದಾರೆ ಎಂದು ಹೇಳಿದ್ದಾರೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹತ್ತುವಾಗ, ಕೊನೆಯ ಬಾರಿಗೆ ವಾಟ್ಸಾಪ್ ಕರೆ ಮೂಲಕ ರೆಡ್ಡೊಯೊಂದಿಗೆ ಮಾತನಾಡಿದ್ದೇವೆ ಎಂದು ಕುಟುಂಬ ತಿಳಿಸಿದೆ.

ಆದರೆ ಇದಾದ ಬಳಿಕ 4 ದಿನಗಳ ಕಾಲ ಆತನ ಫೋನ್ ಸ್ವಿಚ್ ಆಫ್ ಆಗಿದ್ದು, ಆತ ಎಲ್ಲಿದ್ದಾನೆ ಎಂಬ ಆತಂಕ ಮನೆಯವರನ್ನು ಕಾಡಿತ್ತು. ಬಳಿಕ ಸೀನಿಯರ್‌ ಅಧಿಕಾರಿಗಳಿಂದ ಬಂದ ಕರೆ ತಮ್ಮ ಮಗನಿಗೆ ಏನೋ ಆಗಿದೆ ಎಂಬುದನ್ನು ದೃಢಪಡಿಸಿತ್ತು.

ಸಾಯಿ ಕಿರಣ್‌ನ ಕುಟುಂಬಸ್ಥರು ಚೆರಿಯಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಮತ್ತು ಘಟನೆಯ ಬಗ್ಗೆ ದೆಹಲಿ ವಿಮಾನ ನಿಲ್ದಾಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ‘ಶೂನ್ಯ ಎಫ್‌ಐಆರ್’ ದಾಖಲಾಗಿದ್ದು, ಸೇನಾ ಯೋಧರ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐ ನರೇಂದ್ರ ರೆಡ್ಡಿ ತಿಳಿಸಿದ್ದಾರೆ.

ಅಲ್ಲಿಂದ ಫರೀದ್‌ಕೋಟ್‌ ವಿಮಾನ ಹತ್ತಲು ಉದ್ದೇಶಿಸಿ ಯೋಧ ದೆಹಲಿಗೆ ಬಂದಿಳಿದಿರುವುದು ದೆಹಲಿ ವಿಮಾನ ನಿಲ್ದಾಣದ ಸಿಸಿಟಿವಿ ಕ್ಯಾಮೆರಾಗಳಿಂದ ದೃಢಪಟ್ಟಿದೆ. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ದೆಹಲಿ ಸೇನಾ ಪೊಲೀಸರಿಗೆ ವರ್ಗಾಯಿಸಲಾಗಿದೆ. ಇದೇ ವೇಳೆ ನಾಪತ್ತೆಯಾಗಿರುವ ಯೋಧನ ಪತ್ತೆಗೆ ಸಿದ್ದಿಪೇಟೆ ಪೊಲೀಸರು 3 ತಂಡಗಳನ್ನು ರಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT