ಸಾಂದರ್ಭಿಕ ಚಿತ್ರ 
ದೇಶ

ದೇಶದ 11 ರಾಜ್ಯಗಳಲ್ಲಿ 101 ಓಮಿಕ್ರಾನ್ ಪ್ರಕರಣ ಪತ್ತೆ: ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ

ಇಲ್ಲಿಯವರೆಗೂ ದೇಶದಲ್ಲಿನ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 101 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ.

ನವದೆಹಲಿ:  ಇಲ್ಲಿಯವರೆಗೂ ದೇಶದಲ್ಲಿನ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 101 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ.

ಜಂಟಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ ವಾಲ್, ಮಹಾರಾಷ್ಟ್ರದಿಂದ 32 ಪ್ರಕರಣಗಳು ವರದಿಯಾಗಿವೆ, ದೆಹಲಿಯಲ್ಲಿ 22, ರಾಜಸ್ಥಾನದಲ್ಲಿ 17, ಕರ್ನಾಟಕ ಮತ್ತು ತೆಲಂಗಾಣದಲ್ಲಿ 8, ಗುಜರಾತ್ ಮತ್ತು ಕೇರಳದಲ್ಲಿ ತಲಾ 5, ಆಂಧ್ರ ಪ್ರದೇಶ, ಚಂಡೀಘಡ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿರುವುದಾಗಿ ತಿಳಿಸಿದರು.

ವಿಶ್ವದ 91 ರಾಷ್ಟ್ರಗಳಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿರುವುದಾಗಿ ಹೇಳಿದ ಲವ್ ಅಗರ್ ವಾಲ್, ಓಮಿಕ್ರಾನ್ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಸಮುದಾಯಕ್ಕೆ ಹರಡಿದಾಗ ಓಮಿಕ್ರಾನ್ ಡೆಲ್ಟಾ ರೂಪಾಂತರನ್ನು ಹೊರಹಾಕುವ ಸಾಧ್ಯತೆಯಿರುವುದಾಗಿ ತಿಳಿಸಿದರು.

ದೇಶದಲ್ಲಿ ಕೋವಿಡ್ ಲಸಿಕಾ ಅಭಿಯಾನವನ್ನು ಶ್ಲಾಘಿಸಿದ ಆರೋಗ್ಯ ಸಚಿವಾಲಯದ ಅಧಿಕಾರಿ, ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆಯನ್ನು ದೇಶದಲ್ಲಿ ನಡೆಸಲಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಕೇರಳದಿಂದಲೇ ಶೇ. 40.31 ರಷ್ಟು ಕೊಡುಗೆಯಿದೆ. ಕಳೆದ 20 ದಿನಗಳಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ 10,000ಕ್ಕಿಂತ ಇಳಿಕೆಯಾಗಿದೆ ಎಂದು ಅಗರ್ ವಾಲ್ ಹೇಳಿದರು. 

ಕ್ರಿಸ್ ಮಸ್ ಹಾಗೂ ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಅನವಶ್ಯಕವಾಗಿ ಓಡಾಡಬೇಡಿ, ಗುಂಪು ಗುಂಪಾಗಿ ಸೇರಬೇಡಿ ಹಾಗೂ ಅದ್ದೂರಿತನದಿಂದ ಹಬ್ಬ ಆಚರಿಸದಂತೆ ಐಸಿಎಂಆರ್ ಡಿಜಿ ಡಾ. ಬಲರಾಮ್ ಭಾರ್ಗವ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ನ್ ಮಾಡುವ ವಿಚಾರಕ್ಕೆ ಗಲಾಟೆ: 65ರ ವೃದ್ಧನ ಮೇಲೆ ಮನಸೋ ಇಚ್ಛೆ ಹಲ್ಲೆ, ರೌಡಿಶೀಟ್ ಗೆ ಪೊಲೀಸರ ಸಿದ್ಧತೆ? Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

SCROLL FOR NEXT