ಕೇಂದ್ರ ಮಹಿಳಾ ಖಾತೆ ಸಚಿವೆ ಸ್ಮೃತಿ ಇರಾನಿ 
ದೇಶ

ಮಹಿಳೆಯರ ಬಗ್ಗೆ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಆಕ್ಷೇಪಾರ್ಹ ಹೇಳಿಕೆ: ಲೋಕಸಭೆಯಲ್ಲಿ ಮಹಿಳಾ ಖಾತೆ ಸಚಿವೆ ಸ್ಮೃತಿ ಇರಾನಿ ಖಂಡನೆ

ಕರ್ನಾಟಕದ ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಸದನದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಬಗ್ಗೆ ನೀಡಿದ್ದ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಇಂದು ಲೋಕಸಭೆಯಲ್ಲಿ ಕೂಡ ಸದ್ದು ಮಾಡಿತು. ಕಾಂಗ್ರೆಸ್ ನಾಯಕರು ಸಹ ರಮೇಶ್ ಕುಮಾರ್ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ. 

ನವದೆಹಲಿ: ಕರ್ನಾಟಕದ ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಸದನದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಬಗ್ಗೆ ನೀಡಿದ್ದ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಇಂದು ಲೋಕಸಭೆಯಲ್ಲಿ ಕೂಡ ಸದ್ದು ಮಾಡಿತು. ಕಾಂಗ್ರೆಸ್ ನಾಯಕರು ಸಹ ರಮೇಶ್ ಕುಮಾರ್ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ. 

ಇಂದು ಲೋಕಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಕೆ ಸಚಿವೆ ಸ್ಮೃತಿ ಇರಾನಿ ಈ ವಿಷಯವನ್ನು ಪ್ರಸ್ತಾಪಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ‘ಮಹಿಳೆ ಅತ್ಯಾಚಾರಕ್ಕೊಳಗಾದಾಗ ಆನಂದಿಸಬೇಕು’ ಎಂದು ವಿಧಾನಸೌಧದೊಳಗೆ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಹೇಳಿರುವುದು ಮಹಿಳೆಯರ ನಾಚಿಕೆಗೇಡಿನ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿಂದು ಮಾತನಾಡಿ ಖಂಡಿಸಿದ್ದಾರೆ. 

 ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷವು ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಪ್ರಾಮಾಣಿಕವಾಗಿಲ್ಲ. ರಮೇಶ್ ಕುಮಾರ್ ಅವರ ಹೇಳಿಕೆಯನ್ನು ಖಂಡಿಸಿ ಪಕ್ಷ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

ಮಹಿಳಾ ಸಶಕ್ತೀಕರಣ ಬಗ್ಗೆ ಮಾತನಾಡುವ ಕಾಂಗ್ರೆಸ್, ಹುಡುಗಿಯಾದರೂ ಹೋರಾಟ ನಡೆಸಬಹುದು ಎಂದು ಉತ್ತರ ಪ್ರದೇಶದಲ್ಲಿ ಘೋಷಣೆ ಕೂಗುವ ಪಕ್ಷ ಮೊದಲು ಈ ಕಾಂಗ್ರೆಸ್ ನಾಯಕನನ್ನು ಅಮಾನತು ಮಾಡಲಿ ಎಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video