ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಖಿಲೇಶ್ ಯಾದವ್ 
ದೇಶ

ಹಸಿವಿನ ಸೂಚ್ಯಂಕ, ರೈತರ ಆತ್ಮಹತ್ಯೆಯಲ್ಲಿ ಉತ್ತರ ಪ್ರದೇಶ ನಂಬರ್ 1: ಬಿಜೆಪಿ ವಿರುದ್ಧ ಅಖಿಲೇಶ್ ವಾಗ್ದಾಳಿ

ವಿವಿಧ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯುವ ಬಿಜೆಪಿ ಹೇಳಿಕೆ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಇಂದಿಲ್ಲಿ ವಾಗ್ದಾಳಿ ನಡೆಸಿದರು.

ರಾಯ್ ಬರೇಲಿ: ವಿವಿಧ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯುವ ಬಿಜೆಪಿ ಹೇಳಿಕೆ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಇಂದಿಲ್ಲಿ ವಾಗ್ದಾಳಿ ನಡೆಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ಉತ್ತರ ಪ್ರದೇಶ ನಂಬರ್ 1 ಎಂದು ಹೇಳಿಕೊಳ್ಳುವವರು ವಾಸ್ತವವಾಗಿ ಕಸ್ಟಡಿ ಸಾವುಗಳು, ಹಸಿವಿನ ಸೂಚ್ಯಂಕ, ರೈತರ ಆತ್ಮಹತ್ಯೆಗಳು, ಸಾರ್ವಜನಿಕ ಉದ್ಯಮಗಳು ಮತ್ತು ಬ್ಯಾಂಕ್ ಗಳ ಮಾರಾಟ, ಹಸುಗಳನ್ನು ಜೀವಂತವಾಗಿ ಹೂಳುವ ವಿಚಾರಗಳಲ್ಲಿ ಅಗ್ರಸ್ಥಾನಕ್ಕೆ ಕೊಂಡೊಯ್ದಿದ್ದಾರೆ ಎಂದು ಕಿಡಿಕಾರಿದರು.

ಉತ್ತರ ಪ್ರದೇಶದಲ್ಲಿ ವ್ಯಾಪಾರ ಮಾಡುವುದು ಸುಲಭವಾಗಿಲ್ಲ ಆದರೆ, ಅಪರಾಧ ಮಾಡುವುದು ಸುಲಭವಾಗಿದೆ. ರಸ್ತೆಗಳ ಸ್ಥಿತಿ ನೋಡಿದರೆ ಯೋಜನೆಯ ಗುಣಮಟ್ಟ ತಿಳಿಯುತ್ತದೆ. ಬಿಜೆಪಿ ಹೊಸದಾಗಿ ನಿರ್ಮಿಸಿದ ರಸ್ತೆಯಲ್ಲಿ ತೆಂಗಿನಕಾಯಿ ಒಡೆದರೆ ರಸ್ತೆ ಒಡೆಯುತ್ತದೆ ಎಂದು ಟೀಕಿಸಿದರು.

ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಉತ್ತಮ ಕಾರ್ಯನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಡಬಲ್ ಇಂಜಿನ್ ಸರ್ಕಾರವನ್ನು ಕಿತ್ತು ಎಸೆಯುವವರೆಗೂ ಜನರು ವಿರಮಿಸುವುದಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಿಂದ ಬಿಜೆಪಿ ನಿರ್ನಾಮವಾಗಲಿದೆ ಎಂದು ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT