ರಾಹುಲ್ ಗಾಂಧಿ 
ದೇಶ

ಅಮೇಥಿಗಿಂದು ರಾಹುಲ್ ಗಾಂಧಿ ಭೇಟಿ: 'ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ' ಪಾದಯಾತ್ರೆಗೆ ಚಾಲನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಉತ್ತರಪ್ರದೇಶದ ಅಮೇಥಿಗೆ ಭೇಟಿ ನೀಡಲಿದ್ದು, ಈ ವೇಳೆ  'ಬಿಜೆಪಿ ಭಗಾವೊ ಮೆಹಂಗೈ ಹಠಾವೋ' ('ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ') ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಉತ್ತರಪ್ರದೇಶದ ಅಮೇಥಿಗೆ ಭೇಟಿ ನೀಡಲಿದ್ದು, ಈ ವೇಳೆ  'ಬಿಜೆಪಿ ಭಗಾವೊ' 'ಮೆಹಂಗೈ ಹಠಾವೋ' ('ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ') ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಕಾಂಗ್ರೆಸ್​​ನಿಂದ ರಾಷ್ಟ್ರಾದ್ಯಂತ ನವೆಂಬರ್​ 14ರಿಂದ ಸಾರ್ವಜನಿಕ ಜಾಗೃತಿ ​ಅಭಿಯಾನ ನಡೆಯುತ್ತಿದ್ದು, ಅದರ ಒಂದು ಭಾಗವಾಗಿ ಈ ರ್ಯಾಲಿ ಇಂದು ಅಮೇಠಿಯಲ್ಲಿ ನಡೆಯುತ್ತಿದೆ.  

ರಾಹುಲ್​ ಗಾಂಧಿ ಜಗದೀಶ್​ಪುರದಿಂದ ಹರಿಮೌವರೆಗೆ ಪಾದಯಾತ್ರೆ ನಡೆಸಲಿದ್ದಾರೆ ಎಂದೂ ಹೇಳಲಾಗಿದೆ. ಈ  ಪಾದಯಾತ್ರೆಯಲ್ಲಿ ಸ್ಥಳೀಯ ಕಾಂಗ್ರೆಸ್​ ನಾಯಕರೂ ಕೂಡ ಪಾಲ್ಗೊಳ್ಳುವರು ಎಂದು ತಿಳಿದುಬಂದಿದೆ.

ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿಯಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿದ್ದರು. ಸೋಲು ಕಂಡ ಎರಡೂವರೆ ವರ್ಷದ ಬಳಿಕ ರಾಹುಲ್ ಅವರು ಅಮೇಥಿಗೆ ಭೇಟಿ ನೀಡುತ್ತಿದ್ದಾರೆ.

ಅಮೇಥಿ ಈ ಹಿಂದಿನ 15 ಲೋಕಸಭಾ ಚುನಾವಣೆಯಲ್ಲೂ ನೆಹರೂ-ಗಾಂಧಿ ಕುಟುಂಬದ ಭದ್ರಕೋಟೆಯೆಂದೇ ಬಿಂಬಿತವಾಗಿತ್ತು. ಆದರೆ, 2019ರಲ್ಲಿ ಇದು ಗಾಂಧಿ ಕುಟುಂಬದ ಕೈತಪ್ಪಿತ್ತು. ಇಂದು ರಾಹುಲ್ ಗಾಂಧಿ ಅಲ್ಲಿಗೆ ತೆರಳಲಿದ್ದು, ದಿನಪೂರ್ತಿ ಅಲ್ಲಿಯೇ ಕಾಲ ಕಳೆಯಲಿದ್ದಾರೆ. ಹಾಗೇಯೇ ಭಾನುವಾರ ಪ್ರಿಯಾಂಕಾ ಗಾಂಧಿಯವರು  ಅಮೇಥಿಗೆ ಭೇಟಿ ನೀಡಲಿದ್ದಾರೆ.

2017ರಲ್ಲಿ ಉತ್ತರಪ್ರದೇಶದಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಸಾಧಿಸಿತ್ತು. ಒಟ್ಟಾರೆ 403 ಕ್ಷೇತ್ರಗಳಲ್ಲಿ 312 ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದಿತ್ತು. ಸಮಾಜವಾದಿ ಪಕ್ಷ 47, ಬಿಎಸ್​ಪಿ 19 ಸೀಟುಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ಕೇವಲ 7 ಕ್ಷೇತ್ರಗಳಲ್ಲಿ ಜಯಭೇರಿ ಸಾಧಿಸಿತ್ತು. ಆದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಅಲ್ಲಿ ಅಧಿಕಾರಿ ಹಿಡಿಯಬೇಕು ಎಂಬುದು ಕಾಂಗ್ರೆಸ್​ನ ಪ್ರಯತ್ನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT