ನಂದಕುಮಾರ್​ - 
ದೇಶ

ಕೇರಳ: ನಿನ್ನೆ ಪ್ರೀತಿ ನಿರಾಕರಿಸಿದ ಯುವತಿ ಹತ್ಯೆ ಮಾಡಿದ್ದ ಭಗ್ನಪ್ರೇಮಿ ಇಂದು ಚಿಕಿತ್ಸೆ ಫಲಿಸದೆ ಸಾವು

ತಿಕ್ಕೋಡಿಯಲ್ಲಿ ನಿನ್ನೆ ಭೀಕರ ಘಟನೆಯೊಂದು ಜರುಗಿತ್ತು. ಅದರಲ್ಲಿ ಯುವತಿಗೆ ಚಾಕು ಚುಚ್ಚಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಬಳಿಕ ಭಗ್ನ ಪ್ರೇಮಿ ತಾನೂ ಸಹ ಚಾಕುವಿನಿಂದ ಚುಚ್ಚಿಕೊಂಡು ಬೆಂಕಿ ಹಚ್ಚಿಕೊಂಡಿದ್ದ.

ಕೋಯಿಕ್ಕೋಡ್: ತಿಕ್ಕೋಡಿಯಲ್ಲಿ ನಿನ್ನೆ ಭೀಕರ ಘಟನೆಯೊಂದು ಜರುಗಿತ್ತು. ಅದರಲ್ಲಿ ಯುವತಿಗೆ ಚಾಕು ಚುಚ್ಚಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಬಳಿಕ ಭಗ್ನ ಪ್ರೇಮಿ ತಾನೂ ಸಹ ಚಾಕುವಿನಿಂದ ಚುಚ್ಚಿಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಆದರೆ ಚಿಕಿತ್ಸೆ ಫಲಿಸದ ಹಿನ್ನೆಲೆ ಶನಿವಾರ ನಂದಕುಮಾರ್(31) ಮೃತಪಟ್ಟಿದ್ದಾರೆ.

ಘಟನೆ ವಿವರ
ತಿಕ್ಕೋಡಿಯ ಪಳ್ಳಿತಾಳಂ ನಿವಾಸಿಯಾದ ನಂದಕುಮಾರ್​ ಕೃಷ್ಣಪ್ರಿಯಾ ಎಂಬ ಯುವತಿಯನ್ನು ಪ್ರೀತಿಸುವಂತೆ ಕಾಡುತ್ತಿದ್ದ. ಆದ್ರೆ ಕೃಷ್ಣಪ್ರಿಯಾ ಈತನ ಪ್ರೀತಿ ನಿರಾಕರಿಸಿದ್ದಳು. ಹಾಗೆಯೇ ಈತ ಕೊಡುತ್ತಿದ್ದ ಕಿರುಕುಳದ ಬಗ್ಗೆ ಸಂಬಂಧಿಕರಿಗೆ ತಿಳಿಸಿದ್ದಳು.

ಎಂದಿನಂತೆ ತಿಕ್ಕೋಡಿ ಪಂಚಾಯತ್​ ಕಚೇರಿಗೆ ಕೆಲಸಕ್ಕೆ ಹೋಗುವಾಗ ಶುಕ್ರವಾರ 9.50 ಸುಮಾರಿಗೆ ನಂದಕುಮಾರ್​ ಪಂಚಾಯತ್​ ಕಚೇರಿಗೆ ತೆರಳಿದ್ದಾನೆ. ಮತ್ತೆ ಅಲ್ಲಿ ಜಗಳವಾಡಿದ್ದಾನೆ. ಕೋಪಗೊಂಡ ಆತ ಆ ವೇಳೆ ಕೃಷ್ಣಪ್ರಿಯಾಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದಾದ ಕೆಲವೇ ಕ್ಷಣದಲ್ಲಿ ಚಾಕುವಿನಿಂದ ತಾನೂ ಸಹ ಚುಚ್ಚಿಕೊಂಡಿದ್ದಾನೆ. ಹಾಗೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಅಲ್ಲಿದ್ದ ಸ್ಥಳೀಯರು ಬೆಂಕಿ ನಂದಿಸಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೃಷ್ಣಪ್ರಿಯಾ ಚಿಕಿತ್ಸೆ ಫಲಿಸದೇ ನಿನ್ನೆ ಸಂಜೆ 5 ಗಂಟೆ ಸುಮಾರು ಮೃತಪಟ್ಟಿದ್ದರು. ಇಂದು ನಂದಕುಮಾರ್ ಸಹ ಸಾವಿಗೀಡಾಗಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT