ಓಮಿಕ್ರಾನ್ ಸಾಂದರ್ಭಿಕ ಚಿತ್ರ 
ದೇಶ

ಓಮಿಕ್ರಾನ್ ಪರಿಣಾಮದ ಮೂರನೇ ಅಲೆ ಫೆಬ್ರವರಿಯಲ್ಲಿ ತೀವ್ರ; ಕೇಂದ್ರ ಸಮಿತಿ 

ಓಮಿಕ್ರಾನ್ ಪರಿಣಾಮದಿಂದ 2022 ರ ಫೆಬ್ರವರಿ ತಿಂಗಳಲ್ಲಿ ಕೊರೋನಾದ ಮೂರನೇ ಅಲೆ ಉತ್ತುಂಗದಲ್ಲಿರಲಿದೆ ಆದರೆ 2 ನೇ ಅಲೆಗಿಂತಲೂ ತೀವ್ರತೆ ಕಡಿಮೆ ಇರಲಿದೆ ಎಂದು ಕೋವಿಡ್-19 ಸಂಬಂಧಿತ ರಾಷ್ಟ್ರೀಯ ಸೂಪರ್ ಮಾಡಲ್ ಸಮಿತಿ ಎಚ್ಚರಿಸಿದೆ. 

ಓಮಿಕ್ರಾನ್ ಪರಿಣಾಮದಿಂದ 2022 ರ ಫೆಬ್ರವರಿ ತಿಂಗಳಲ್ಲಿ ಕೊರೋನಾದ ಮೂರನೇ ಅಲೆ ಉತ್ತುಂಗದಲ್ಲಿರಲಿದೆ ಆದರೆ 2 ನೇ ಅಲೆಗಿಂತಲೂ ತೀವ್ರತೆ ಕಡಿಮೆ ಇರಲಿದೆ ಎಂದು ಕೋವಿಡ್-19 ಸಂಬಂಧಿತ ರಾಷ್ಟ್ರೀಯ ಸೂಪರ್ ಮಾಡಲ್ ಸಮಿತಿ ಎಚ್ಚರಿಸಿದೆ. 

ಭಾರತದಲ್ಲಿ ಸದ್ಯಕ್ಕೆ ದೈನಂದಿನ ಪ್ರಕರಣಗಳ ಸಂಖ್ಯೆ 7,500 ರಷ್ಟಿದೆ. ಡೆಲ್ಟಾ ರೂಪಾಂತರಿಯನ್ನೂ ಮೀರಿ ಓಮಿಕ್ರಾನ್ ರೂಪಾಂತರಿ ಸೋಂಕು ಹರಡಲು ಪ್ರಾರಂಭವಾದರೆ ದೈನಂದಿನ ಪ್ರಕರಣಗಳು ಏರಿಕೆಯಾಗಲಿವೆ ಎಂದು ರಾಷ್ಟ್ರೀಯ ಕೋವಿಡ್-19 ಸೂಪರ್ ಮಾಡಲ್ ಸಮಿತಿ ಹೇಳಿದೆ.

ಸಮಿತಿಯ ಮುಖ್ಯಸ್ಥ ವಿದ್ಯಾಸಾಗರ್ ಮಾತನಾಡಿ, ಓಮಿಕ್ರಾನ್ ನಿಂದಾಗಿ ಭಾರತ ಮೂರನೇ ಅಲೆ ಎದುರಿಸಲಿದೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ರೋಗನಿರೋಧಕತೆ ಇರುವುದರಿಂದ ತೀವ್ರತೆ ಎರಡನೇ ಅಲೆಗಿಂತಲೂ ಕಡಿಮೆ ಇರಲಿದೆ ಎಂದು ಹೇಳಿದ್ದಾರೆ. 

ಮೂರನೇ ಅಲೆ ಎದುರಾದರೂ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಭಾರತದಲ್ಲಿ ದಿನವೊಂದಕ್ಕೆ 2 ಲಕ್ಷ ಪ್ರಕರಣಗಳಿಗಿಂತ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಲು ಸಾಧ್ಯವಿಲ್ಲ ಎಂದು ವಿದ್ಯಾಸಾಗರ್ ವಿವರಿಸಿದ್ದರೆ. ದೇಶದಲ್ಲಿ ಕೊರೋನಾ ಪ್ರಕರಣಗಳು ನಿಧಾನವಾಗಿ ಏರಿಕೆಯಾಗುತ್ತಿದ್ದು, ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಜನತೆಗೆ ಕೇಂದ್ರ ಸಮಿತಿ ಕರೆ ನೀಡಿದೆ. 

"ಈ ಅಂಕಿ-ಅಂಶಗಳು ಮನ್ಸೂಚನೆಯಲ್ಲ, ಪ್ರಕ್ಷೇಪಗಳು, ಭಾರತೀಯ ಜನಸಂಖ್ಯೆಯಲ್ಲಿ ವೈರಾಣು ಹೇಗೆ, ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿದುಕೊಂಡರೆ ಮುನ್ಸೂಚನೆ ನೀಡಬಹುದು. ಒಂದು ವೇಳೆ ರೋಗನಿರೋಧಕ ಶಕ್ತಿ ಕುಂದಿದರೆ, ದಿನವೊಂದಕ್ಕೆ 1.7-1.8 ಲಕ್ಷದವರೆಗೂ ಮೂರನೇ ಅಲೆಯಲ್ಲಿ ದಿನನಿತ್ಯ ಕೊರೋನಾ ಪ್ರಕರಣಗಳು ವರದಿಯಾಗಬಹುದು, ಇದು ಎರಡನೇ ಅಲೆಯಲ್ಲಿ ದಿನನಿತ್ಯ ವರದಿಯಾಗುತ್ತಿದ್ದ ಪ್ರಕರಣಗಳ ಸಂಖ್ಯೆಯಲ್ಲಿ ಅರ್ಧವಷ್ಟೇ ಎಂದು ಸಮಿತಿ ಸದಸ್ಯರು ಹೇಳಿದ್ದಾರೆ. 

ಇದೇ ವೇಳೆ ಹೊಸ ವರ್ಷಾಚರಣೆಯನ್ನು ಸರಳವಾಗಿ ಹೆಚ್ಚು ಜನಸೇರದೇ, ಅನಗತ್ಯ ಸಂಚಾರ ತಪ್ಪಿಸಿ ಆಚರಿಸಲು ಕೇಂದ್ರ ಸರ್ಕಾರ ಕರೆ ನೀಡಿದೆ.
 
ಸೋಂಕು ತಡೆಗೆ ಸಾರ್ವಜನಿಕ ಆರೋಗ್ಯ ಉನ್ನತಿ ಅತ್ಯಗತ್ಯ ವಿಶ್ವಸಂಸ್ಥೆ
ಕೋವಿಡ್-19 ನ ಹೊಸ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸೋಂಕು ತಡೆಗಟ್ಟುವುದಕ್ಕಾಗಿ ಸಾರ್ವಜನಿಕ ಆರೋಗ್ಯ ಉನ್ನತಿ ಹಾಗೂ ಸಾಮಾಜಿಕ ಕ್ರಮಗಳು ಅತ್ಯಗತ್ಯವಾದ ಅಂಶವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್ಒ) ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT