ದಿನೇಶ್ ಗುಂಡೂರಾವ್ 
ದೇಶ

ಗೋವಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಎಂಸಿ ಸಂಭಾವ್ಯ ಅಭ್ಯರ್ಥಿಗಳಿಗೆ ರೂ.10 ರಿಂದ 20 ಕೋಟಿ ಆಫರ್- ಕಾಂಗ್ರೆಸ್ 

ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಂಭಾವ್ಯ ಅಭ್ಯರ್ಥಿಗಳಿಗೆ ಸುಮಾರು 10 ರಿಂದ 20 ಕೋಟಿ ರೂ.ವರೆಗೂ ಆ ಪಕ್ಷದಿಂದ ಆಫರ್ ನೀಡಲಾಗುತ್ತಿದೆ ಎಂದು ಗೋವಾ ಎಐಸಿಸಿ ಉಸ್ತುವಾರಿ ದಿನೇಶ್ ಗುಂಡೂರಾವ್ ಶನಿವಾರ ಹೇಳಿದ್ದಾರೆ.

ಪಣಜಿ: ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಂಭಾವ್ಯ ಅಭ್ಯರ್ಥಿಗಳಿಗೆ ಸುಮಾರು 10 ರಿಂದ 20 ಕೋಟಿ ರೂ.ವರೆಗೂ ಆ ಪಕ್ಷದಿಂದ ಆಫರ್ ನೀಡಲಾಗುತ್ತಿದೆ ಎಂದು ಗೋವಾ ಎಐಸಿಸಿ ಉಸ್ತುವಾರಿ ದಿನೇಶ್ ಗುಂಡೂರಾವ್ ಶನಿವಾರ ಹೇಳಿದ್ದಾರೆ.  ಆಡಳಿತಾರೂಢ ಬಿಜೆಪಿ ನೆರವಿನೊಂದಿಗೆ ಕಾಂಗ್ರೆಸ್ ದುರ್ಬಲಗೊಳಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಪಣಜಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೋಟಿ, ಕೋಟಿ ರೂಪಾಯಿಗಳಲ್ಲಿ ಬರುತ್ತಿರುವ ಟಿಎಂಪಿ ಪಕ್ಷ ಗೋವಾಕ್ಕೆ ಏನು ಕೊಡುಗೆ ನೀಡಿದೆ. ಅಭ್ಯರ್ಥಿಯಾಗ ಬಯಸುವ ಜನರಿಗೆ 10 ರಿಂದ 20 ಕೋಟಿ ರೂ. ನೀಡುವುದಾಗಿ ಹೇಳುತ್ತಿದ್ದಾರೆ. ಅವರಿಂದ ಅಷ್ಟೊಂದು ಹಣ ಎಲ್ಲಿಂದ ಬರುತ್ತದೆ. ಯಾವ ಉದ್ದೇಶಕ್ಕಾಗಿ ಅವರು ಇದನ್ನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. 

ಟಿಎಂಸಿ ಅಜೆಂಡಾ ಸ್ಪಷ್ಟವಾಗಿದೆ. ಅವರು ಬಿಜೆಪಿಗೆ ನೆರವಾಗಲು ಬಯಸಿದ್ದಾರೆ. ಈಗ ಟಿಎಂಸಿ ಜೊತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ, ಏಕೆಂದರೆ ಅವರು ಕಾಂಗ್ರೆಸ್ ನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯನ್ನಲ್ಲಾ, ಅದು ಅವರ ಅಜೆಂಡಾವಾಗಿರುವುದರಿಂದ ಅವರೊಂದಿಗೆ ಮೈತ್ರಿಯನ್ನು ನಾವು ಹೇಗೆ ಸ್ವೀಕರಿಸಲು ಸಾಧ್ಯ ಎಂದು ರಾವ್ ಹೇಳಿದರು. 

ಬ್ಯಾನರ್ಜಿ ಮತ್ತು ಅವರ ಪಕ್ಷ ಬಿಜೆಪಿ ವಿರೋಧಿ ಪಕ್ಷಗಳನ್ನು ಒಡೆಯಲು ಪ್ರಯತ್ನಿಸುತ್ತಿದೆ. ಅವರು ಮಹಾಘಟಬಂಧನ್ ನ್ನು ಹೊಡೆಯುತ್ತಿದ್ದಾರೆ.  . ಬಿಜೆಪಿ ವಿರುದ್ಧ ಹೋರಾಡುವ ಹೆಸರಿನಲ್ಲಿ ಅವರು ಕಾಂಗ್ರೆಸ್ ಅನ್ನು ದುರ್ಬಲಗೊಳಿಸಲು, ಕಾಂಗ್ರೆಸ್ ಅನ್ನು ನಾಶಮಾಡಲು ಬಯಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು, ಬಿಜೆಪಿ ವಿರೋಧಿ ಮುಖಂಡರನ್ನು ಖರೀದಿಸುತ್ತಿರುವ ಮಮತಾ ಬ್ಯಾನರ್ಜಿ, ಬಿಜೆಪಿ ಮುಖಂಡರು ಏಕೆ ಖರೀದಿಸುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

SCROLL FOR NEXT