ಪ್ರಧಾನಿ ಮೋದಿ 
ದೇಶ

ಯುಪಿ ಪ್ಲಸ್ ಯೋಗಿ = ತುಂಬಾ ಉಪಯೋಗಿ: ಯೋಗಿ ಸರ್ಕಾರವನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರವನ್ನು ಹಾಡಿ ಹೊಗಳಿದ ಪ್ರಧಾನಿ ನರೇಂದ್ರ ಮೋದಿ ಅವರು, "ಯುಪಿ ಪ್ಲಸ್ ಯೋಗಿ ಬಹುತ್ ಹೈ ಉಪಯೋಗಿ"....

ಶಹಜಹಾನ್‌ಪುರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರವನ್ನು ಹಾಡಿ ಹೊಗಳಿದ ಪ್ರಧಾನಿ ನರೇಂದ್ರ ಮೋದಿ ಅವರು, "ಯುಪಿ ಪ್ಲಸ್ ಯೋಗಿ ಬಹುತ್ ಹೈ ಉಪಯೋಗಿ"(ಯುಪಿ ಪ್ಲಸ್ ಯೋಗಿ = ತುಂಬಾ ಉಪಯೋಗಿ)" ಎಂದು ಶನಿವಾರ ಹೇಳಿದ್ದಾರೆ.

ಇಂದು 594 ಕಿಮೀ ಉದ್ದದ ಸುಮಾರು ರೂ. 36,230 ಕೋಟಿ ರೂ ವೆಚ್ಚದ ಗಂಗಾ ಎಕ್ಸ್‌ಪ್ರೆಸ್‌ವೇಗೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದರು

ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಿದ ನಂತರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯೋದಿ ಆದಿತ್ಯನಾಥ್ ಸರ್ಕಾರ ಮಾಫಿಯಾಗಳನ್ನು ತೊಡೆದುಹಾಕಲು ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

ಗಂಗಾ ಎಕ್ಸ್​ಪ್ರೆಸ್​ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿ. ಹಾಗೆ ಯುವಕರಿಗೆ ಉದ್ಯೋಗ ಪಡೆಯಲು ಬಹು ಅನುಕೂಲವಾಗುತ್ತದೆ. ಗಂಗಾ ಎಕ್ಸ್​ಪ್ರೆಸ್​ ಹೈವೇ ಕೆಲಸ ಇಂದಿನಿಂದಲೇ ಪ್ರಾರಂಭವಾಗಲಿದೆ ಎಂದು ಹೇಳಿದರು.

ಮೀರತ್, ಹಾಪುರ್, ಬುಲಂದ್‌ಶಹರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್‌ಪುರ್, ಹರ್ದೋಯಿ, ಉನ್ನಾವೋ, ರಾಯ್‌ಬರೇಲಿ, ಪ್ರತಾಪ್‌ಗಢ್ ಮತ್ತು ಪ್ರಯಾಗ್‌ರಾಜ್‌ನಲ್ಲಿರುವ ಎಲ್ಲರನ್ನೂ ನಾನು ಅಭಿನಂದಿಸುತ್ತೇನೆ. 600 ಕಿಮೀ ಉದ್ದದ ಈ ಎಕ್ಸ್‌ಪ್ರೆಸ್‌ವೇಗೆ 36,000 ಕೋಟಿ ರೂ.ಗೂ ಹೆಚ್ಚು ವೆಚ್ಚವಾಗಲಿದೆ. ಗಂಗಾ ಎಕ್ಸ್‌ಪ್ರೆಸ್‌ವೇ ಈ ಪ್ರದೇಶದಲ್ಲಿ ಹೊಸ ಕೈಗಾರಿಕೆಗಳನ್ನು ತರುತ್ತದೆ ಎಂದು ವಿವರಿಸಿದರು.

ಮುಂದುವರೆದು ಮಾತನಾಡಿದ ಅವರು, ಮೂಲಸೌಕರ್ಯಗಳನ್ನು ಹೊಂದಿರುವ ಅತ್ಯಂತ ಆಧುನಿಕ ರಾಜ್ಯವಾಗಿ ಉತ್ತರ ಪ್ರದೇಶ ಗುರುತಿಸಲ್ಪಡುವ ಕಾಲವೇನು ದೂರವಿಲ್ಲ. ಇಲ್ಲಿ ಹೆದ್ದಾರಿಗಳ ಸಮೂಹ, ಹೊಸ ವಿಮಾನ ನಿಲ್ದಾಣಗಳು, ಹೊಸ ರೈಲು ಮಾರ್ಗಗಳು ಜನರಿಗೆ ಹಲವಾರು ಉಪಯೋಗಗಳನ್ನು ನೀಡಲಿವೆ ಎಂದು ಮಾಹಿತಿ ನೀಡಿದರು.

ಯುಪಿಯಲ್ಲಿ ಈ ಹಿಂದೆ ಸಾರ್ವಜನಿಕರ ಹಣವನ್ನು ಹೇಗೆ ಬಳಸಲಾಗಿದೆ ಎಂಬುದನ್ನು ನೀವು ನೋಡಿದ್ದೀರಿ. ಇಂದು ಉತ್ತರ ಪ್ರದೇಶದ ಹಣವನ್ನು ರಾಜ್ಯದ ಅಭಿವೃದ್ಧಿಗೆ ಬಳಸಲಾಗುತ್ತಿದೆ. ಈ ಹಿಂದೆ ತಮ್ಮ ಖಜಾನೆಯನ್ನು ತಾವೇ ತುಂಬಿಸಿಕೊಳ್ಳಲು ದೊಡ್ಡ ದೊಡ್ಡ ಯೋಜನೆಗಳನ್ನು ಕಾಗದದಲ್ಲಿ ಮಾತ್ರ ಆರಂಭಿಸಲಾಗುತ್ತಿತ್ತು ಎಂದು ಇತರೆ ಪಕ್ಷಗಳ ವಿರುದ್ಧ ಹರಿಹಾಯ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT