ರೆಂಜಿತ್ ಶ್ರೀನಿವಾಸನ್ - ಎ ಎಸ್ ಶಾನ್ 
ದೇಶ

ಕೇರಳ: ಎಸ್‌ಡಿಪಿಐ ಮುಖಂಡನ ಕೊಲೆ ನಡೆದು ಕೆಲವೇ ಗಂಟೆಗಳಲ್ಲಿ ಬಿಜೆಪಿ ನಾಯಕನ ಹತ್ಯೆ

ಕೇರಳದಲ್ಲಿ ಮುಸ್ಲಿಂ ಸಂಘಟನೆಯಾದ ಎಸ್‌ಡಿಪಿಐ ಮತ್ತು ಬಿಜೆಪಿ ನಡುವಿನ ರಾಜಕೀಯ ದ್ವೇಷಕ್ಕೆ ಭಾನುವಾರ ಕೆಲವೇ ಗಂಟಗಳ ಅಂತರದಲ್ಲಿ ಉಭಯ ಪಕ್ಷಗಳ ಇಬ್ಬರು ಮುಖಂಡರ ಕೊಲೆ ನಡೆದಿದೆ.

ಅಲಪ್ಪುಳ: ಕೇರಳದಲ್ಲಿ ಮುಸ್ಲಿಂ ಸಂಘಟನೆಯಾದ ಎಸ್‌ಡಿಪಿಐ ಮತ್ತು ಬಿಜೆಪಿ ನಡುವಿನ ರಾಜಕೀಯ ದ್ವೇಷಕ್ಕೆ ಭಾನುವಾರ ಕೆಲವೇ ಗಂಟಗಳ ಅಂತರದಲ್ಲಿ ಉಭಯ ಪಕ್ಷಗಳ ಇಬ್ಬರು ಮುಖಂಡರ ಕೊಲೆ ನಡೆದಿದೆ.

ಆಲಪ್ಪುಳ ಜಿಲ್ಲೆಯಲ್ಲಿ ಈ ಎರಡೂ ಕೊಲೆ ನಡೆದಿದ್ದು, ಶನಿವಾರ ತಡರಾತ್ರಿ ಮುಸ್ಲಿಂ ಪಕ್ಷದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಎ ಎಸ್ ಶಾನ್(38) ಅವರನ್ನು ಕೊಲೆ ಮಾಡಿದ ನಂತರ, ಇಂದು ಬೆಳಗಿನ ಜಾವ ಬಿಜೆಪಿಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರೆಂಜಿತ್ ಶ್ರೀನಿವಾಸನ್(40) ಅವರ ಮನೆಗೆ ನುಗ್ಗಿದ ಜನರ ಗುಂಪೊಂದು ಅವರನ್ನು ಹತ್ಯೆ ಮಾಡಿದೆ. ಎಸ್‌ಡಿಪಿಐ ಪಿಎಫ್‌ಐನ ರಾಜಕೀಯ ಸಂಘಟನೆಯಾಗಿದೆ.

ಎರಡು ಕೊಲೆಯ ನಂತರ ಪರಿಸ್ಥಿತಿ ಉದ್ವಿಗ್ನ ಗೊಂಡಿರುವುದರಿಂದ, ಭಾನುವಾರ ಮತ್ತು ಸೋಮವಾರ ಎರಡು ದಿನಗಳ ಕಾಲ ಅಲಪ್ಪುಳ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿನ್ನೆ ರಾತ್ರಿ ಅಲಪ್ಪುಳದ ಮನ್ನಂಚೇರಿ ಬಳಿಯ ಪೊನ್ನಾಡ್ ಎಂಬಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ಶಾನ್ ಅವರಿಗೆ ಬೈಕ್ ಗೆ ಕಾರು ಡಿಕ್ಕಿ ಹೊಡೆಸಿದ ದುಷ್ಕರ್ಮಿಗಳು, ಎಸ್ ಡಿಪಿಐ ನಾಯಕ ಕೆಳಗೆ ಬೀಳುತ್ತಿದ್ದಂತೆಯೇ ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 

ಇದು ಪ್ರತೀಕಾರದ ದಾಳಿಯಂತೆ ತೋರುತ್ತಿದೆ. ಅಲಪ್ಪುಳ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ರೆಂಜಿತ್ ಅವರ ಮನೆಗೆ ನುಗ್ಗಿದ ಜನರ ಗುಂಪು ಅವರನ್ನೂ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ ರೆಂಜಿತ್ 2016ರ ಚುನಾವಣೆಯಲ್ಲಿ ಅಲಪ್ಪುಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT