ಪಿ.ಟಿ ಉಷಾ 
ದೇಶ

ಪಿ.ಟಿ. ಉಷಾ ವಿರುದ್ದ ಪ್ರಕರಣ ದಾಖಲಿಸಿದ ಕೇರಳ ಪೊಲೀಸರು

ಭಾರತದ ದಿಗ್ಗಜ ಅಥ್ಲೀಟ್, ಓಟದ ರಾಣಿ ಎಂದೇ ಹೆಸರು ವಾಸಿಯಾಗಿರುವ ಪಿ.ಟಿ. ಉಷಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೇರಳದ ಕೋಜಿಕ್ಕೋಡ್‌ ಪೊಲೀಸರು ಪಿ ಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.

ಭಾರತದ ದಿಗ್ಗಜ ಅಥ್ಲೀಟ್, ಓಟದ ರಾಣಿ ಎಂದೇ ಹೆಸರು ವಾಸಿಯಾಗಿರುವ ಪಿ.ಟಿ. ಉಷಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೇರಳದ ಕೋಜಿಕ್ಕೋಡ್‌ ಪೊಲೀಸರು ಪಿ ಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.

ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ನೀಡಿದ ದೂರಿನ ಮೇರೆಗೆ ಉಷಾ ಸೇರಿದಂತೆ ಇತರ ಆರು ಮಂದಿ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಪಿಟಿ ಉಷಾ ಅವರ ಖಾತರಿಯಂತೆ , ಜೆಮ್ಮಾ ಜೋಸೆಫ್ ಕೇರಳದ ಕೋಝಿಕ್ಕೋಡ್‌ನಲ್ಲಿ 1,012 ಚದರ ಅಡಿ ಫ್ಲಾಟ್ ಅನ್ನು ಬಿಲ್ಡರ್‌ ಒಬ್ಬರಿಂದ ಖರೀದಿಸಿದ್ದಾರೆ.

ಈ ಕ್ರಮವಾಗಿ ಜೋಸೆಫ್ ಕಂತುಗಳ ರೂಪದಲ್ಲಿ ರೂ. 46 ಲಕ್ಷ ರೂ ಪಾವತಿಸಿದ್ದಾರೆ. ಹಣ ಪಾವತಿಸಿದ್ದರೂ ಬಿಲ್ಡರ್ ಜೋಸೆಫ್ ಗೆ ಫ್ಲಾಟ್ ಬರೆದುಕೊಟ್ಟಿರಲಿಲ್ಲ. ಇದರೊಂದಿಗೆ ಜೋಸೆಫ್ ಕೋಝಿಕ್ಕೋಡ್ ಪೊಲೀಸರ ಮೊರೆ ಹೋಗಿದ್ದಾರೆ. ಪಿ.ಟಿ. ಉಷಾ ನೀಡಿದ ಖಾತರಿಯಂತೆ ಬಿಲ್ಡರ್ ಗೆ ಹಣ ಪಾವತಿಸಿದ್ದರೂ ಬಿಲ್ಡರ್ ಫ್ಲಾಟ್ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ಜೋಸೆಫ್ ದೂರಿನ ಸಂಬಂಧ ಜಿಲ್ಲಾ ಪೊಲೀಸ್ ಮುಖ್ಯಸ್ಥ ಎವಿ ಜಾರ್ಜ್ ಅವರು ತನಿಖೆಗೆ ಆದೇಶಿಸಿದ್ದು, ಪ್ರಕರಣವನ್ನು ವೆಲ್ಲೂರು ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT