ಪಿ.ಟಿ ಉಷಾ 
ದೇಶ

ಪಿ.ಟಿ. ಉಷಾ ವಿರುದ್ದ ಪ್ರಕರಣ ದಾಖಲಿಸಿದ ಕೇರಳ ಪೊಲೀಸರು

ಭಾರತದ ದಿಗ್ಗಜ ಅಥ್ಲೀಟ್, ಓಟದ ರಾಣಿ ಎಂದೇ ಹೆಸರು ವಾಸಿಯಾಗಿರುವ ಪಿ.ಟಿ. ಉಷಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೇರಳದ ಕೋಜಿಕ್ಕೋಡ್‌ ಪೊಲೀಸರು ಪಿ ಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.

ಭಾರತದ ದಿಗ್ಗಜ ಅಥ್ಲೀಟ್, ಓಟದ ರಾಣಿ ಎಂದೇ ಹೆಸರು ವಾಸಿಯಾಗಿರುವ ಪಿ.ಟಿ. ಉಷಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೇರಳದ ಕೋಜಿಕ್ಕೋಡ್‌ ಪೊಲೀಸರು ಪಿ ಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.

ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ನೀಡಿದ ದೂರಿನ ಮೇರೆಗೆ ಉಷಾ ಸೇರಿದಂತೆ ಇತರ ಆರು ಮಂದಿ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಪಿಟಿ ಉಷಾ ಅವರ ಖಾತರಿಯಂತೆ , ಜೆಮ್ಮಾ ಜೋಸೆಫ್ ಕೇರಳದ ಕೋಝಿಕ್ಕೋಡ್‌ನಲ್ಲಿ 1,012 ಚದರ ಅಡಿ ಫ್ಲಾಟ್ ಅನ್ನು ಬಿಲ್ಡರ್‌ ಒಬ್ಬರಿಂದ ಖರೀದಿಸಿದ್ದಾರೆ.

ಈ ಕ್ರಮವಾಗಿ ಜೋಸೆಫ್ ಕಂತುಗಳ ರೂಪದಲ್ಲಿ ರೂ. 46 ಲಕ್ಷ ರೂ ಪಾವತಿಸಿದ್ದಾರೆ. ಹಣ ಪಾವತಿಸಿದ್ದರೂ ಬಿಲ್ಡರ್ ಜೋಸೆಫ್ ಗೆ ಫ್ಲಾಟ್ ಬರೆದುಕೊಟ್ಟಿರಲಿಲ್ಲ. ಇದರೊಂದಿಗೆ ಜೋಸೆಫ್ ಕೋಝಿಕ್ಕೋಡ್ ಪೊಲೀಸರ ಮೊರೆ ಹೋಗಿದ್ದಾರೆ. ಪಿ.ಟಿ. ಉಷಾ ನೀಡಿದ ಖಾತರಿಯಂತೆ ಬಿಲ್ಡರ್ ಗೆ ಹಣ ಪಾವತಿಸಿದ್ದರೂ ಬಿಲ್ಡರ್ ಫ್ಲಾಟ್ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ಜೋಸೆಫ್ ದೂರಿನ ಸಂಬಂಧ ಜಿಲ್ಲಾ ಪೊಲೀಸ್ ಮುಖ್ಯಸ್ಥ ಎವಿ ಜಾರ್ಜ್ ಅವರು ತನಿಖೆಗೆ ಆದೇಶಿಸಿದ್ದು, ಪ್ರಕರಣವನ್ನು ವೆಲ್ಲೂರು ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT