ಅಮೃತಸರದಲ್ಲಿರುವ ಸ್ವರ್ಣ ಮಂದಿರ 
ದೇಶ

ಸ್ವರ್ಣಮಂದಿರದಲ್ಲಿ ಅಪಚಾರ ಘಟನೆ: ಪ್ರಾಯಶ್ಚಿತ್ತಕ್ಕಾಗಿ ಎಸ್ ಜಿಪಿಸಿ ಅಖಂಡ ಪಠ್!

ಅಮೃತಸರದ ಸ್ವರ್ಣ ಮಂದಿರದಲ್ಲಿ ಅಪಚಾರವೆಸಗಲು ನಡೆದ ಯತ್ನಕ್ಕೆ ಪ್ರಾಯಶ್ಚಿತ್ತವಾಗಿ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್ ಜಿಪಿಸಿ) ಭಾನುವಾರದಂದು ಅಖಂಡ್ ಪಠ್ (ಪವಿತ್ರ ಗ್ರಂಥದ ತಡೆರಹಿತ ಪಠಣೆ)ಯನ್ನು ಪ್ರಾರಂಭಿಸಿದೆ.

ಅಮೃತಸರ: ಅಮೃತಸರದ ಸ್ವರ್ಣ ಮಂದಿರದಲ್ಲಿ ಅಪಚಾರವೆಸಗಲು ನಡೆದ ಯತ್ನಕ್ಕೆ ಪ್ರಾಯಶ್ಚಿತ್ತವಾಗಿ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್ ಜಿಪಿಸಿ) ಭಾನುವಾರದಂದು ಅಖಂಡ್ ಪಠ್ (ಪವಿತ್ರ ಗ್ರಂಥದ ತಡೆರಹಿತ ಪಠಣೆ)ಯನ್ನು ಪ್ರಾರಂಭಿಸಿದೆ.
 
ಎಸ್ ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಅಖಂಡ ಪಠ್ ಚಾಲನೆ ವೇಳೆ ಉಪಸ್ಥಿತರಿದ್ದರು. ಗುರುದ್ವಾರದಲ್ಲಿ ಶನಿವಾರ ಸಂಜೆ ನಡೆದ ಅಪಚಾರದ ಯತ್ನದ ಘಟನೆ ಸಿಖ್ ಸಮುದಾಯದಲ್ಲಿ ಆಳವಾದ ಮಾನಸಿಕ ಮತ್ತು ಆಧ್ಯಾತ್ಮಿಕ ದುಃಖವನ್ನುಂಟು ಮಾಡಿದೆ ಎಂದು ಹರ್ಜಿಂದರ್ ಸಿಂಗ್ ಹೇಳಿದ್ದಾರೆ. 

ಈ ಘಟನೆಯ ಹಿಂದಿನ ಷಡ್ಯಂತ್ರವನ್ನು ಸರ್ಕಾರ ಬಹಿರಂಗಗೊಳಿಸಬೇಕು, ಇಂತಹ ಘಟನೆಗಳನ್ನು ತಪ್ಪಿಸದೇ ಇದ್ದಲ್ಲಿ ಸರ್ಕಾರ ರಾಜ್ಯದಲ್ಲಿ ಹದಗೆಡುವ ವಾತಾವರಣಕ್ಕೆ ಹೊಣೆಯಾಗಬೇಕಾಗುತ್ತದೆ ಎಂದು ಹರ್ಜಿಂದರ್ ಸಿಂಗ್ ಎಚ್ಚರಿಸಿದ್ದಾರೆ.
 
ಶನಿವಾರ ಸಿಖ್​​ರ ಪವಿತ್ರ ಧಾರ್ಮಿಕ ಕ್ಷೇತ್ರವಾದ ಸ್ವರ್ಣಮಂದಿರ ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಯುವಕನನ್ನು ಹೊಡೆದು ಹತ್ಯೆ ಮಾಡಲಾಗಿತ್ತು. ಈ ಘಟನೆ ಬೆನ್ನಲ್ಲೇ ಕಪುರ್ತಲಾದಲ್ಲೂ ಇಂಥಹದ್ದೇ ಘಟನೆ ವರದಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT