ಅಮೃತಸರದಲ್ಲಿರುವ ಸ್ವರ್ಣ ಮಂದಿರ 
ದೇಶ

ಸ್ವರ್ಣಮಂದಿರದಲ್ಲಿ ಅಪಚಾರ ಘಟನೆ: ಪ್ರಾಯಶ್ಚಿತ್ತಕ್ಕಾಗಿ ಎಸ್ ಜಿಪಿಸಿ ಅಖಂಡ ಪಠ್!

ಅಮೃತಸರದ ಸ್ವರ್ಣ ಮಂದಿರದಲ್ಲಿ ಅಪಚಾರವೆಸಗಲು ನಡೆದ ಯತ್ನಕ್ಕೆ ಪ್ರಾಯಶ್ಚಿತ್ತವಾಗಿ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್ ಜಿಪಿಸಿ) ಭಾನುವಾರದಂದು ಅಖಂಡ್ ಪಠ್ (ಪವಿತ್ರ ಗ್ರಂಥದ ತಡೆರಹಿತ ಪಠಣೆ)ಯನ್ನು ಪ್ರಾರಂಭಿಸಿದೆ.

ಅಮೃತಸರ: ಅಮೃತಸರದ ಸ್ವರ್ಣ ಮಂದಿರದಲ್ಲಿ ಅಪಚಾರವೆಸಗಲು ನಡೆದ ಯತ್ನಕ್ಕೆ ಪ್ರಾಯಶ್ಚಿತ್ತವಾಗಿ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್ ಜಿಪಿಸಿ) ಭಾನುವಾರದಂದು ಅಖಂಡ್ ಪಠ್ (ಪವಿತ್ರ ಗ್ರಂಥದ ತಡೆರಹಿತ ಪಠಣೆ)ಯನ್ನು ಪ್ರಾರಂಭಿಸಿದೆ.
 
ಎಸ್ ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಅಖಂಡ ಪಠ್ ಚಾಲನೆ ವೇಳೆ ಉಪಸ್ಥಿತರಿದ್ದರು. ಗುರುದ್ವಾರದಲ್ಲಿ ಶನಿವಾರ ಸಂಜೆ ನಡೆದ ಅಪಚಾರದ ಯತ್ನದ ಘಟನೆ ಸಿಖ್ ಸಮುದಾಯದಲ್ಲಿ ಆಳವಾದ ಮಾನಸಿಕ ಮತ್ತು ಆಧ್ಯಾತ್ಮಿಕ ದುಃಖವನ್ನುಂಟು ಮಾಡಿದೆ ಎಂದು ಹರ್ಜಿಂದರ್ ಸಿಂಗ್ ಹೇಳಿದ್ದಾರೆ. 

ಈ ಘಟನೆಯ ಹಿಂದಿನ ಷಡ್ಯಂತ್ರವನ್ನು ಸರ್ಕಾರ ಬಹಿರಂಗಗೊಳಿಸಬೇಕು, ಇಂತಹ ಘಟನೆಗಳನ್ನು ತಪ್ಪಿಸದೇ ಇದ್ದಲ್ಲಿ ಸರ್ಕಾರ ರಾಜ್ಯದಲ್ಲಿ ಹದಗೆಡುವ ವಾತಾವರಣಕ್ಕೆ ಹೊಣೆಯಾಗಬೇಕಾಗುತ್ತದೆ ಎಂದು ಹರ್ಜಿಂದರ್ ಸಿಂಗ್ ಎಚ್ಚರಿಸಿದ್ದಾರೆ.
 
ಶನಿವಾರ ಸಿಖ್​​ರ ಪವಿತ್ರ ಧಾರ್ಮಿಕ ಕ್ಷೇತ್ರವಾದ ಸ್ವರ್ಣಮಂದಿರ ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಯುವಕನನ್ನು ಹೊಡೆದು ಹತ್ಯೆ ಮಾಡಲಾಗಿತ್ತು. ಈ ಘಟನೆ ಬೆನ್ನಲ್ಲೇ ಕಪುರ್ತಲಾದಲ್ಲೂ ಇಂಥಹದ್ದೇ ಘಟನೆ ವರದಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT