ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಇಂದು 6,563 ಹೊಸ ಪ್ರಕರಣ ಪತ್ತೆ, 132 ಸಾವು ವರದಿ

ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರಿ ವೈರಸ್ ನ ಭೀತಿ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದ್ದು, ಇಂದು ಕೂಡ ದೇಶಾದ್ಯಂತ 6500ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ನವದೆಹಲಿ: ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರಿ ವೈರಸ್ ನ ಭೀತಿ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದ್ದು, ಇಂದು ಕೂಡ ದೇಶಾದ್ಯಂತ 6500ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6,563 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ನಿನ್ನೆ ದಾಖಲಾಗಿದ್ದ ಹೊಸ ಪ್ರಕರಣಗಳಿಗಿಂತ ಶೇ7ರಷ್ಟು ಕಡಿಮೆ ಎನ್ನಲಾಗಿದೆ. ನಿನ್ನೆ ದೇಶಾದ್ಯಂತ 7,081 ಹೊಸ ಸೋಂಕು ಪ್ರಕರಣಗಳು ದಾಖಲಾಗಿತ್ತು.

ಅಂತೆಯೇ ಇದೇ ಅವಧಿಯಲ್ಲಿ 132 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 4,77,554ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 8,077 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,41,87,017ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ,98.39ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿನ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 82, 267ರಷ್ಟಿದೆ ಎಂದು ತಿಳಿದುಬಂದಿದೆ.

ಅಂತೆಯೇ ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನ ಮುಂದುವರೆದಿದ್ದು, ಈ ವರೆಗೂ 137.67 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT