ಕೋವಿಡ್-19 ಲಸಿಕೆ 
ದೇಶ

ಲಸಿಕೆಯಲ್ಲಿನ ಮಾರ್ಪಾಡು ಹೊಸ ರೂಪಾಂತರಿಗಳನ್ನು ಎದುರಿಸಲು ಸಹಕಾರಿ: ಡಾ. ಗುಲೇರಿಯ 

ಕೊರೋನಾದ ಹೊಸ ರೂಪಾಂತರಿಗಳನ್ನು ಎದುರಿಸುವುದಕ್ಕೆ ಮಾರ್ಪಾಡು ಮಾಡಲಾದ ಲಸಿಕೆಗಳು ಸಹಕಾರಿಯಾಗಬಹುದು ಎಂದು ದೆಹಲಿ ಏಮ್ಸ್ ನ ನಿರ್ದೇಶಕ ರಣ್ ದೀಪ್ ಗುಲೇರಿಯಾ ಹೇಳಿದ್ದಾರೆ. 

ನವದೆಹಲಿ: ಕೊರೋನಾದ ಹೊಸ ರೂಪಾಂತರಿಗಳನ್ನು ಎದುರಿಸುವುದಕ್ಕೆ ಮಾರ್ಪಾಡು ಮಾಡಲಾದ ಲಸಿಕೆಗಳು ಸಹಕಾರಿಯಾಗಬಹುದು ಎಂದು ದೆಹಲಿ ಏಮ್ಸ್ ನ ನಿರ್ದೇಶಕ ರಣ್ ದೀಪ್ ಗುಲೇರಿಯಾ ಹೇಳಿದ್ದಾರೆ. 

ಕೊರೋನಾದ ಓಮಿಕ್ರಾನ್ ರೂಪಾಂತರಿ ಪ್ರಕರಣಗಳ ಏರಿಕೆಯ ನಡುವೆ ಮೂರನೇ ಡೋಸ್ ಲಸಿಕೆ ಕುರಿತು ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಏಮ್ಸ್ ನಿರ್ದೇಶಕ ರಣ್ದೀಪ್ ಗುಲೇರಿಯಾ ಈ ಹೇಳಿಕೆ ನೀಡಿದ್ದಾರೆ. 

ಮಹಾರಾಷ್ಟ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಓಮಿಕ್ರಾನ್ ನ ತೀವ್ರತೆಯ ವಿಷಯವಾಗಿ ಮುಂದಿನ ಕೆಲವು ವಾರಗಳು ಬಹಳ ಮುಖ್ಯವಾಗಿರಲಿದೆ ಎಂದು ಹೇಳಿದ್ದಾರೆ. 

ಕೋವಿಡ್-19 ನ ಹೊಸ ರೂಪಾಂತರಿಯ ರೋಗದ ತೀವ್ರತೆ ಕಡಿಮೆ ಇದೆ ಎನ್ನುವುದು ಸಮಾಧಾನಕರ ಅಂಶವಾಗಿದ್ದು ಲಸಿಕೆಗಳಲ್ಲಿ ಮಾರ್ಪಾಡುಗಳು ಉಂಟಾಗಬಹುದು ಎಂದು ಡಾ. ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ. 

ನಾವು ಎರಡನೇ ಪೀಳಿಗೆ (ಸೆಕೆಂಡ್ ಜನರೇಷನ್ ಲಸಿಕೆ) ಗಳನ್ನು ಹೊಂದಲಿದ್ದೇವೆ. ಇದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ಈಗಿನ ಲಸಿಕೆಗಳು ಪರಿಣಾಮಕಾರಿಯಾಗಿವೆ. ಆದರೆ ಹೊಸ ರೂಪಾಂತರಿಗಳ ವಿರುದ್ಧ ರೋಗನಿರೋಧಕ ಶಕ್ತಿ ಕಡಿಮೆಯಾಗಬಹುದು. ಆದಾಗ್ಯೂ ಲಸಿಕೆಗಳಲ್ಲಿ ಮಾರ್ಪಾಡು ಮಾಡಬಹುದು ಎಂದು ಗುಲೇರಿಯಾ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT