ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಮುಂದಿನ ವರ್ಷದ ಮೇ ತಿಂಗಳವರೆಗೂ ಉಚಿತ ಪಡಿತರ ವಿತರಣೆ ವಿಸ್ತರಿಸಲು ದೆಹಲಿ ಸಂಪುಟ ತೀರ್ಮಾನ

ಮುಂದಿನ ವರ್ಷದ ಮೇ. 31ರವರೆಗೂ ನಗರದಲ್ಲಿ ಉಚಿತ ಪಡಿತರ ವಿತರಣೆಯನ್ನು ವಿಸ್ತರಿಸಲು ದೆಹಲಿ ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಿಳಿಸಿದರು.

ನವದೆಹಲಿ: ಮುಂದಿನ ವರ್ಷದ ಮೇ. 31ರವರೆಗೂ ನಗರದಲ್ಲಿ ಉಚಿತ ಪಡಿತರ ವಿತರಣೆಯನ್ನು ವಿಸ್ತರಿಸಲು ದೆಹಲಿ ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಿಳಿಸಿದರು.

ಇಂದು ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾವೈರಸ್ ಪ್ರಾರಂಭವಾದಾಗಿನಿಂದ ಆರಂಭಿಸಲಾದ ಉಚಿತ ಪಡಿತರ ವಿತರಣೆ ಅವಧಿ ಪೂರ್ಣಗೊಂಡಿದೆ. ಆದ್ದರಿಂದ ಇದನ್ನೂ ಇನ್ನು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. ಮುಂದಿನ ವರ್ಷದ ಮೇ ತಿಂಗಳವರೆಗೂ ಮುಂದುವರೆಸಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕೇಜ್ರಿವಾಲ್ ವರ್ಚುಯಲ್ ಪ್ರೆಸ್ ಕಾನ್ಫರೆನ್ಸ್ ನಲ್ಲಿ ಹೇಳಿದರು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಮತ್ತು ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ ಫಲಾನುಭವಿಗಳಿಗೆ ದೆಹಲಿ ಸರ್ಕಾರ ಉಚಿತವಾಗಿ ಪಡಿತರ ವಿತರಿಸುತ್ತಿದೆ. ದೆಹಲಿಯಲ್ಲಿ ಸುಮಾರು 2,000 ನ್ಯಾಯ ಬೆಲೆ ಅಂಗಡಿಗಳಿದ್ದು, 17, 77 ಲಕ್ಷ ಪಡಿತರ ಕಾರ್ಡ್ ದಾರರು ಮತ್ತು  ಸುಮಾರು 72. 78 ಲಕ್ಷ ಫಲಾನುಭವಿಗಳಿದ್ದಾರೆ. ಪಡಿತರ ಅಂಗಡಿಗಳ ಮೂಲಕ ಉಚಿತವಾಗಿ ಪಡಿತರ ನೀಡಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT