ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಮುಂದಿನ ವರ್ಷದ ಮೇ ತಿಂಗಳವರೆಗೂ ಉಚಿತ ಪಡಿತರ ವಿತರಣೆ ವಿಸ್ತರಿಸಲು ದೆಹಲಿ ಸಂಪುಟ ತೀರ್ಮಾನ

ಮುಂದಿನ ವರ್ಷದ ಮೇ. 31ರವರೆಗೂ ನಗರದಲ್ಲಿ ಉಚಿತ ಪಡಿತರ ವಿತರಣೆಯನ್ನು ವಿಸ್ತರಿಸಲು ದೆಹಲಿ ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಿಳಿಸಿದರು.

ನವದೆಹಲಿ: ಮುಂದಿನ ವರ್ಷದ ಮೇ. 31ರವರೆಗೂ ನಗರದಲ್ಲಿ ಉಚಿತ ಪಡಿತರ ವಿತರಣೆಯನ್ನು ವಿಸ್ತರಿಸಲು ದೆಹಲಿ ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಿಳಿಸಿದರು.

ಇಂದು ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾವೈರಸ್ ಪ್ರಾರಂಭವಾದಾಗಿನಿಂದ ಆರಂಭಿಸಲಾದ ಉಚಿತ ಪಡಿತರ ವಿತರಣೆ ಅವಧಿ ಪೂರ್ಣಗೊಂಡಿದೆ. ಆದ್ದರಿಂದ ಇದನ್ನೂ ಇನ್ನು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. ಮುಂದಿನ ವರ್ಷದ ಮೇ ತಿಂಗಳವರೆಗೂ ಮುಂದುವರೆಸಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕೇಜ್ರಿವಾಲ್ ವರ್ಚುಯಲ್ ಪ್ರೆಸ್ ಕಾನ್ಫರೆನ್ಸ್ ನಲ್ಲಿ ಹೇಳಿದರು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಮತ್ತು ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ ಫಲಾನುಭವಿಗಳಿಗೆ ದೆಹಲಿ ಸರ್ಕಾರ ಉಚಿತವಾಗಿ ಪಡಿತರ ವಿತರಿಸುತ್ತಿದೆ. ದೆಹಲಿಯಲ್ಲಿ ಸುಮಾರು 2,000 ನ್ಯಾಯ ಬೆಲೆ ಅಂಗಡಿಗಳಿದ್ದು, 17, 77 ಲಕ್ಷ ಪಡಿತರ ಕಾರ್ಡ್ ದಾರರು ಮತ್ತು  ಸುಮಾರು 72. 78 ಲಕ್ಷ ಫಲಾನುಭವಿಗಳಿದ್ದಾರೆ. ಪಡಿತರ ಅಂಗಡಿಗಳ ಮೂಲಕ ಉಚಿತವಾಗಿ ಪಡಿತರ ನೀಡಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT