ಸಾಂದರ್ಭಿಕ ಚಿತ್ರ 
ದೇಶ

ಮರು ಮತಾಂತರಗೊಂಡು ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಿ: ಮತಾಂತರಿತ ಮುಸ್ಲಮರಿಗೆ ಹಿಂದೂ ಸಂಘಟನೆ ಮನವಿ

ಮುಸ್ಲಿಂ ಸಮುದಾಯಕ್ಕೆ ಮತಾಂತರಗೊಂಡ ಹಿಂದೂಗಳು ಕೂಡಲೇ ಮರು ಮತಾಂತರಗೊಂಡು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಹಿಂದೂ ಸಂಘಟನೆಯೊಂದು ಮನವಿ ಮಾಡಿದೆ.

ಗುರುಗ್ರಾಮ: ಮುಸ್ಲಿಂ ಸಮುದಾಯಕ್ಕೆ ಮತಾಂತರಗೊಂಡ ಹಿಂದೂಗಳು ಕೂಡಲೇ ಮರು ಮತಾಂತರಗೊಂಡು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಹಿಂದೂ ಸಂಘಟನೆಯೊಂದು ಮನವಿ ಮಾಡಿದೆ.

ಹರ್ಯಾಣದ ಗುರುಗ್ರಾಮದಲ್ಲಿ ನಡೆದ ಬಹಿರಂಗ ಸಾಮೂಹಿಕ ಮುಸ್ಲಿಂ ಪ್ರಾರ್ಥನೆಗೆ ಅಡ್ಡಿಪಡ್ಡಿಸಿದ ಸಂಯುಕ್ತ ಸಂಘರ್ಷ ಸಮಿತಿಯು ಮತಾಂತರಿತ ಮುಸ್ಲಿಮರು ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಹೇಳಿದೆ.

ಸಂಯುಕ್ತ ಸಂಘರ್ಷ ಸಮಿತಿಯು  ಸುಮಾರು 32 ಹಿಂದೂ ಪರ ಸಂಘಟನೆಗಳನ್ನು ಹೊಂದಿರುವ ಒಕ್ಕೂಟವಾಗಿದ್ದು, ಈ ಸಂಯುಕ್ತ ಸಂಘರ್ಷ ಸಮಿತಿಯ ಅಧ್ಯಕ್ಷ ಮಹಾವೀರ್ ಭಾರದ್ವಾಜ್ ಅವರು ಮತಾಂತರಿತ ಮುಸ್ಲಿಮರು ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. 

'ಹರ್ಯಾಣದ  ಬಹುಪಾಲು ಮುಸ್ಲಿಮರ ಪೂರ್ವಜರು ಹಿಂದೂ ಸಮುದಾಯಕ್ಕೆ ಸೇರಿದವರು.  ಹೀಗಾಗಿ ಅವರು ಮರು ಮತಾಂತರಗೊಂಡು ಹಿಂಧೂ ಧರ್ಮಕ್ಕೆ ವಾಪಸ್ ಆಗಿ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು. ನಾವು ಇಲ್ಲಿನ ಲೀಸರ್ ವ್ಯಾಲಿಯಲ್ಲಿ ಸಾಮೂಹಿಕ 'ಘರ್ ವಾಪ್ಸಿ' ಕಾರ್ಯಕ್ರಮ ಆಯೋಜಿಸುತ್ತೇವೆ. ಆ ಮೂಲಕ ಅವರು ತಮ್ಮ ಪೂರ್ವಜರ ಧರ್ಮಕ್ಕೆ ಹಿಂದುರುಗಬಹುದು. ನಾವು ಅವರನ್ನು ಮುಕ್ತವಾಗಿ ಮತ್ತು ಆತ್ಮೀಯವಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಹರ್ಯಾಣದಲ್ಲಿ ಕೆಲ ಹಿಂದೂಪರ ಸಂಘಟನೆಗಳು ಮುಸ್ಲಿಮರು ತೆರೆದ ಜಾಗದಲ್ಲಿ "ನಮಾಜ್" ನೀಡುವುದನ್ನು ವಿರೋಧಿಸಿತ್ತಿದ್ದು, ಮುಸ್ಲಿಮರು ಶುಕ್ರವಾರದ ಪ್ರಾರ್ಥನೆಗೆ ಅಡ್ಡಿಪಡಿಸಲು ಅವರು "ಭಾರತ್ ಮಾತಾ ಕಿ ಜೈ" ಮತ್ತು "ಜೈ ಶ್ರೀ ರಾಮ್" ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ಇದರಿಂದ ಹಲವು ಬಾರಿ ಸಮಸ್ಯೆಗಳು ಎದುರಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.  
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT