ಶಾಲೆ (ಸಾಂಕೇತಿಕ ಚಿತ್ರ) 
ದೇಶ

ಮುಸ್ಲಿಂ ಬಾಹುಳ್ಯವಿರುವ ದ್ವೀಪದಲ್ಲಿ ಪ್ರತಿ ಶುಕ್ರವಾರ ಶಾಲೆಗಳಿಗೆ ರಜೆ ಪದ್ಧತಿಗೆ ಅಂತ್ಯ ಹಾಡಿದ ಲಕ್ಷದ್ವೀಪ ಆಡಳಿತ

ಮುಸ್ಲಿಂ ಬಹುಳ್ಯವಿರುವ ಲಕ್ಷದ್ವೀಪದಲ್ಲಿ ಇನ್ನು ಮುಂದಿನ ದಿನಗಳಲ್ಲಿ ಶುಕ್ರವಾರ ವಾರದ ರಜೆಯಾಗಿರುವುದಿಲ್ಲ. ದೇಶದ ಇತರೆಡೆಗಳಂತೆಯೇ ಶುಕ್ರವಾರದಂದು ಕಾರ್ಯನಿರ್ವಹಣೆಯ ದಿನವನ್ನಾಗಿ ಆದೇಶ ಹೊರಡಿಸಿದೆ

ಕವರಟ್ಟಿ: ಮುಸ್ಲಿಂ ಬಾಹುಳ್ಯವಿರುವ ಲಕ್ಷದ್ವೀಪದಲ್ಲಿ ಇನ್ನು ಮುಂದಿನ ದಿನಗಳಲ್ಲಿ ಶುಕ್ರವಾರ ವಾರದ ರಜೆಯಾಗಿರುವುದಿಲ್ಲ. ದೇಶದ ಇತರೆಡೆಗಳಂತೆಯೇ ಶುಕ್ರವಾರದಂದು ಕಾರ್ಯನಿರ್ವಹಣೆಯ ದಿನವನ್ನಾಗಿ ಹಾಗೂ ಭಾನುವಾರಗಳನ್ನು ರಜೆಯ ದಿನವನ್ನಾಗಿ ಲಕ್ಷದ್ವೀಪ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಧಾರ್ಮಿಕ ನೆಲೆಗಟ್ಟಿನಲ್ಲಿ ಶುಕ್ರವಾರಗಳಂದು ವಿದ್ಯಾರ್ಥಿಗಳಿಗೆ ರಜೆ ನೀಡಲಾಗುತ್ತಿತ್ತು. 

ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ದ್ವೀಪದಲ್ಲಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪ್ರಾರಂಭಿಸಿದಾಗಿನಿಂದಲೂ ಶುಕ್ರವಾರದಂದು ರಜೆ ನೀಡಲಾಗುತ್ತಿತ್ತು ಹಾಗೂ ಶನಿವಾರದಂದು ಅರ್ಧ ದಿನ ಕಾರ್ಯನಿರ್ವಹಣೆ ಮಾಡಲಾಗುತ್ತಿತ್ತು. ಶಾಲೆಗಳ ಯಾವುದೇ ಆಡಳಿತ ವಿಭಾಗಗಳೊಂದಿಗೆ, ಜನಪ್ರತಿನಿಧಿಗಳೊಂದಿಗೆ ಚರ್ಚಿಸದೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೊಹಮ್ಮದ್ ಫೈಜಲ್ ಹೇಳಿದ್ದಾರೆ. 

ಇದು ಏಕಪಕ್ಷೀಯ ನಿರ್ಧಾರವಾಗಿದೆ, ಇದು ಜನತಾ ಆದೇಶದ ಪರಿಧಿಯಲ್ಲಿಲ್ಲ ಎಂದು ಫೈಜಲ್ ತಿಳಿಸಿದ್ದಾರೆ. ಸ್ಥಳೀಯ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಜಾರಿಗೆ ತಂದರೂ ಜನರೊಂದಿಗೆ ಅದನ್ನು ಚರ್ಚಿಸಬೇಕು ಎಂದು ಹೇಳಿದ್ದಾರೆ. 

ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಸಂಪನ್ಮೂಲಗಳ ಅತ್ಯುತ್ತಮ ಬಳಕೆ, ಕಲಿಯುವವರ ಸರಿಯಾದ ತೊಡಗಿಸಿಕೊಳ್ಳುವಿಕೆ ಮತ್ತು ಬೋಧನಾ ಕಲಿಕಾ ಪ್ರಕ್ರಿಯೆಯ ಅಗತ್ಯ ಯೋಜನೆಗಾಗಿ ಆಡಳಿತ ಶಾಲೆಗಳ ಸಮಯವನ್ನು ಹಾಗೂ ನಿಯಮಿತ ಶಾಲಾ ಚಟುವಟಿಕೆಗಳಲ್ಲಿ ಮಾರ್ಪಡಿಸಲಾಗಿದೆ. ಲಕ್ಷದ್ವೀಪ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷ ಪಿಪಿ ಅಬ್ಬಾಸ್ ಈ ಆದೇಶವನ್ನು ಮರುಪರಿಶೀಲನೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ