ರಾಜ್ಯಸಭೆ ಕಲಾಪ 
ದೇಶ

ರಾಜ್ಯಸಭಾ ಸದಸ್ಯರ ಅಮಾನತು: ಸಮಸ್ಯೆ ಬಗೆಹರಿಸಲು ಮೋದಿ ಸರ್ಕಾರ ನೀಡಿದ ಆಹ್ವಾನ ತಿರಸ್ಕರಿಸಿದ ಪ್ರತಿಪಕ್ಷಗಳು

ಸಂಸತ್ತಿನ ಚಳಿಗಾಲದ ಅಧಿವೇಶನ ಅಂತಿಮ ವಾರಕ್ಕೆ ಕಾಲಿಡುತ್ತಿದ್ದು, 12 ರಾಜ್ಯಸಭಾ ಸಂಸದರ ಅಮಾನತು ವಿರೋಧಿಸಿ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ...

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಅಂತಿಮ ವಾರಕ್ಕೆ ಕಾಲಿಡುತ್ತಿದ್ದು, 12 ರಾಜ್ಯಸಭಾ ಸಂಸದರ ಅಮಾನತು ವಿರೋಧಿಸಿ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ  ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ನೀಡಿದ ಆಹ್ವಾನವನ್ನು ಪ್ರತಿಪಕ್ಷಗಳು ತಿರಸ್ಕರಿಸಿವೆ.

ಕೇಂದ್ರ ಸರ್ಕಾರ ಐದು ಪ್ರತಿಪಕ್ಷಗಳ ನಾಯಕರ ಸಭೆ ಕರೆದಿದೆ. ಆದರೆ ಪ್ರತಿ ಪಕ್ಷಗಳು ಈ ಸಭೆಗೆ ಹಾಜರಾಗುವ ಸಾಧ್ಯತೆಯಿಲ್ಲ ಮತ್ತು ಎಲ್ಲಾ ಪ್ರತಿ ಪ್ರತಿಪಕ್ಷಗಳೊಂದಿಗೆ ಈ ವಿಷಯ ಚರ್ಚಿಸಬೇಕೆಂದು ಬಯಸುತ್ತಿವೆ.

ವಿರೋಧ ಪಕ್ಷಗಳ ನಾಯಕರು ಸೋಮವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ಸೇರಿ ಮುಂದಿನ ನಡೆ ಬಗ್ಗೆ ನಿರ್ಧರಿಸುವ ಸಾಧ್ಯತೆ ಇದೆ.

12 ಸಂಸದರ ಅಮಾನತು ವಿರುದ್ಧದ ಹೋರಾಟದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಿವೆ. ವಿಪಕ್ಷಗಳಲ್ಲಿ ಒಡಕು ಮೂಡಿಸಲು ಅಧಿವೇಶನದ ಅಂತ್ಯದಲ್ಲಿ ಐದು ಪಕ್ಷಗಳನ್ನು ಮಾತ್ರ ಚರ್ಚೆಗೆ ಕರೆಯಲಾಗಿದೆ ಎಂದು ಅಮಾನತುಗೊಂಡ 12 ಸಂಸದರ ಪೈಕಿ ಒಬ್ಬರಾದ ಸಿಪಿಐ ಸಂಸದ ಬಿನೋಯ್ ವಿಶ್ವಂ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT