ಸಾಂದರ್ಭಿಕ ಚಿತ್ರ 
ದೇಶ

ಭಾರತದಲ್ಲಿ ಈವರೆಗೆ 200 ಓಮಿಕ್ರಾನ್ ಕೇಸು ಪತ್ತೆ; 5,326 ಹೊಸ ಕೋವಿಡ್ ಪ್ರಕರಣ, 453 ಸಾವು

ಭಾರತ ಸೇರಿದಂತೆ ಜಗತ್ತಿನಾದ್ಯಂತ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5 ಸಾವಿರದ 326 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, 453 ಮಂದಿ ಮೃತಪಟ್ಟಿದ್ದಾರೆ.

ನವದೆಹಲಿ: ಭಾರತ ಸೇರಿದಂತೆ ಜಗತ್ತಿನಾದ್ಯಂತ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5 ಸಾವಿರದ 326 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, 453 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6,563 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 79 ಸಾವಿರದ 097 ಆಗಿದೆ. ಹೊಸ ಸೋಂಕಿತರ ಸಂಖ್ಯೆ ಮೊನ್ನೆ ದೇಶಾದ್ಯಂತ 7,081 ಇದ್ದರೆ ನಿನ್ನೆ ಕಡಿಮೆಯಾಗಿದೆ. 8 ಸಾವಿರದ 043 ಮಂದಿ ನಿನ್ನೆ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ ನಿಂದ ಇದುವರೆಗೆ ದೇಶದಲ್ಲಿ 3 ಕೋಟಿಯ 41 ಲಕ್ಷದ 95 ಸಾವಿರದ 060 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 4 ಲಕ್ಷದ 78 ಸಾವಿರದ 007ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ಕೋವಿಡ್ ವೈರಸ್ ನ ವಿರುದ್ಧ ಹೋರಾಡಲು ಲಸಿಕಾ ಅಭಿಯಾನ ಆರಂಭವಾದ ನಂತರ ಇಲ್ಲಿಯವರೆಗೆ 138 ಕೋಟಿಯ 34 ಲಕ್ಷ ಡೋಸ್ ಲಸಿಕೆ ವಿತರಣೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿಯೇ ಫಲಾನುಭವಿಗಳಿಗೆ ಶೇಕಡಾ 100ರಷ್ಟು ಲಸಿಕೆ ನೀಡಿದ ಮೊದಲ ರಾಜ್ಯವಾಗಿ ಹಿಮಾಚಲ ಪ್ರದೇಶ ಹೊರಹೊಮ್ಮಿದ್ದು ಆರೋಗ್ಯ ಇಲಾಖೆಯ ಕಾರ್ಯಕರ್ತರ ಪರಿಶ್ರಮದಿಂದ ಇದು ಸಾಧ್ಯವಾಗಿದೆ. 

ಇದುವರೆಗೆ ದೇಶದಲ್ಲಿ 66 ಕೋಟಿಯ 61 ಲಕ್ಷದ 26 ಸಾವಿರದ 659 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು ನಿನ್ನೆ ಒಂದೇ ದಿನ 10 ಲಕ್ಷದ 14 ಸಾವಿರದ 079 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. 

200 ಓಮಿಕ್ರಾನ್ ಕೇಸು: ಇನ್ನು ಭಾರತದ ವಿವಿಧ ರಾಜ್ಯಗಳಲ್ಲಿ ವರದಿಯಾದಂತೆ ಇದುವರೆಗೆ 200 ಓಮಿಕ್ರಾನ್ ಕೇಸುಗಳು ಪತ್ತೆಯಾಗಿವೆ. ಯಾವ ರಾಜ್ಯದಲ್ಲಿ ಎಷ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT