ಭಯೋತ್ಪಾದಕ ದಾಳಿ 
ದೇಶ

ಜಮ್ಮು-ಕಾಶ್ಮೀರ: ಪ್ರತ್ಯೇಕ ಘಟನೆಯಲ್ಲಿ ಓರ್ವ ನಾಗರಿಕನ ಹತ್ಯೆ, ಪೊಲೀಸ್ ಗೆ ಗಾಯ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಹತ್ಯೆಗಳ ಸುದ್ದಿ ವರದಿಯಾಗುತ್ತಿದ್ದು, ಡಿ.22 ರಂದು ನಡೆದ ಪ್ರತ್ಯೇಕ ಘಟನೆಗಳಲ್ಲಿ ಓರ್ವ ನಾಗರಿಕನ ಹತ್ಯೆ ಮಾಡಲಾಗಿದ್ದು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. 

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಹತ್ಯೆಗಳ ಸುದ್ದಿ ವರದಿಯಾಗುತ್ತಿದ್ದು, ಡಿ.22 ರಂದು ನಡೆದ ಪ್ರತ್ಯೇಕ ಘಟನೆಗಳಲ್ಲಿ ಓರ್ವ ನಾಗರಿಕನ ಹತ್ಯೆ ಮಾಡಲಾಗಿದ್ದು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. 

ಭಯೋತ್ಪಾದಕರು ಈ ಕೃತ್ಯ ಎಸಗಿದ್ದು, ಕಣಿವೆಯಲ್ಲಿ ಈ ಘಟನೆ ಕೆಲವೇ ನಿಮಿಷಗಳ ಅಂತರದಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ನಗರದ ನವಾಕದಲ್ ಪ್ರದೇಶದಲ್ಲಿ ಓರ್ವ ನಾಗರಿಕನನ್ನು ಹತ್ಯೆ ಮಾಡಲಾಗಿದ್ದರೆ, ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಬಿಜ್ಬೆಹರಾ ಪ್ರದೇಶದಲ್ಲಿ ಉಗ್ರರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. 

ಸಂಜೆ 6 ಗಂಟೆ ವೇಳೆಗೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ರೌಫ್ ಅಹ್ಮದ್ ಎಂಬಾತನ ಮೇಲೆ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಆತನನ್ನು ಎಸ್ಎಂಹೆಚ್ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತ ಬದುಕಿ ಉಳಿಯಲಿಲ್ಲ.     

ಈ ಘಟನೆಯ ಬೆನ್ನಲ್ಲೇ ಉಗ್ರರು ಎಎಸ್ಐ ಮೊಹಮ್ಮದ್ ಅಶ್ರಫ್ ಮೇಲೆ ಬಿಜ್ಬೆಹರಾ ಆಸ್ಪತ್ರೆಯ ಹೊರಭಾಗದಲ್ಲಿ ಗುಂಡಿನ  ದಾಳಿ ನಡೆಸಿದ್ದಾರೆ. ಅದೇ ಆಸ್ಪತ್ರೆಗೆ ಎಎಸ್ಐ ನ್ನು ತಕ್ಷಣವೇ ದಾಖಲಿಸಲಾಯಿತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT