ಮೋದಿ-ಮಮತಾ ಬ್ಯಾನರ್ಜಿ 
ದೇಶ

ಮುಖ್ಯಮಂತ್ರಿಗಳ ವರ್ಚ್ಯುಯಲ್ ಸಭೆಯಲ್ಲಿ ಎರಡು ಗಂಟೆ ಕಾದರೂ ಪ್ರಧಾನಿಯೊಂದಿಗೆ ಮಾತನಾಡಲು ಮಮತಾಗೆ ಸಿಗದ ಅವಕಾಶ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವರ್ಚ್ಯುಯಲ್ ಸಭೆಯಲ್ಲಿ 2 ಗಂಟೆಗಳು ಕಾದರೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಮಾತನಾಡುವ ಅವಕಾಶವೇ ಸಿಕ್ಕಿಲ್ಲ. 

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವರ್ಚ್ಯುಯಲ್ ಸಭೆಯಲ್ಲಿ 2 ಗಂಟೆಗಳು ಕಾದರೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಮಾತನಾಡುವ ಅವಕಾಶವೇ ಸಿಕ್ಕಿಲ್ಲ. 

ರಾಜ್ಯದ ಸಚಿವಾಲಯದ ಉನ್ನತ ಮೂಲಗಳು ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದು, ಡಿ.22 ರಂದು ರಾತ್ರಿ ನಡೆದ "ಆಜಾದಿ ಕಿ ಅಮೃತ್ ಮಹೋತ್ಸವ್" ಸಭೆಯಲ್ಲಿ ಬ್ಯಾನರ್ಜಿ ಭಾಗಿಯಾಗಿದ್ದರು. ಆದರೆ ಮಾತನಾಡುವವರ ಪಟ್ಟಿಯಲ್ಲಿ ಮಮತಾ ಬ್ಯಾನರ್ಜಿ ಅವರ ಹೆಸರು ಇಲ್ಲದ ಕಾರಣ ಅವರಿಗೆ ಮಾತನಾಡುವುದಕ್ಕೆ ಅವಕಾಶ ನೀಡಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಈ ಘಟನೆ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ತೀವ್ರ ಅಸಮಾಧಾನಗೊಂಡಿದ್ದು ಇಡೀ ರಾಜ್ಯದ ಆಡಳಿತ ವಿಭಾಗಕ್ಕೆ ನೋವುಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇತರ ರಾಜ್ಯಗಳ ಮುಖ್ಯಮಂತ್ರಿಗಳೂ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT