ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ 
ದೇಶ

ವಿವಾದಾತ್ಮಕ ಪುಸ್ತಕ: ಸಲ್ಮಾನ್ ಖುರ್ಷಿದ್ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಆದೇಶ

ಸನಾತನ ಹಿಂದೂ ಧರ್ಮವನ್ನು ಉಗ್ರ ಸಂಘಟನೆಗಳಿಗೆ ಹೋಲಿಕೆ ಮಾಡಿರುವ ಸಲ್ಮಾನ್ ಖುರ್ಷಿದ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಲಖನೌ ಕೋರ್ಟ್ ಬುಧವಾರದಂದು ಆದೇಶ ನೀಡಿದೆ. 

ಲಖನೌ: ಇತ್ತೀಚೆಗಷ್ಟೇ ಬಿಡುಗಡೆಯಾದ ತಮ್ಮ ಪುಸ್ತಕದಲ್ಲಿ ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಹಿಂದೂ ಧರ್ಮವನ್ನು ಇಸ್ಲಾಮಿಕ್ ಉಗ್ರ ಸಂಘಟನೆ ಹಾಗೂ ಬೊಕೋ ಹರಾಮ್ ಗೆ ಹೋಲಿಕೆ ಮಾಡಿ ವಿವಾದಕ್ಕೀಡಾಗಿದ್ದರು. ಈಗ ಇದೇ ವಿಷಯವಾಗಿ ಖುರ್ಷಿದ್ ಗೆ ಸಂಕಷ್ಟ ಎದುರಾಗಿದೆ. 

ಸನಾತನ ಹಿಂದೂ ಧರ್ಮವನ್ನು ಉಗ್ರ ಸಂಘಟನೆಗಳಿಗೆ ಹೋಲಿಕೆ ಮಾಡಿರುವ ಸಲ್ಮಾನ್ ಖುರ್ಷಿದ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಲಖನೌ ಕೋರ್ಟ್ ಬುಧವಾರದಂದು ಆದೇಶ ನೀಡಿದೆ. 

ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಶಂತನು ತ್ಯಾಗಿ ಎಫ್ಐಆರ್ ದಾಖಲಿಸುವಂತೆ ಸೂಚಿಸಿದ್ದಾರೆ. 

ಕಾನೂನಿನ ಸೂಕ್ತ ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಸೂಕ್ತ ತನಿಖೆ ನಡೆಸುವಂತೆ ಕೋರ್ಟ್ ತನ್ನ ಆದೇಶದ್ಲಲಿ ತಿಳಿಸಿದ್ದು ಮೂರು ದಿನಗಳಲ್ಲಿ ಎಫ್ಐಆರ್ ಪ್ರತಿಯನ್ನು ಕೋರ್ಟ್ ಗೆ ಹಾಜರುಪಡಿಸಬೇಕೆಂದು ಹೇಳಿದೆ. 

ಪುಸ್ತಕದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿ ಶುಭಾಂಗಿ ತಿವಾರಿ ಎಂಬುವವರು ಸೆಕ್ಷನ್ 156 (3) ಸಿಆರ್ ಪಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT