ನಿತೀಶ್ ಕುಮಾರ್ 
ದೇಶ

ವರದಕ್ಷಿಣೆ ರಹಿತ ಮದುವೆಗಳಲ್ಲಿ ಮಾತ್ರ ಬಿಹಾರ ಸಿಎಂ ನಿತೀಶ್ ಕುಮಾರ್ ಭಾಗಿ

ವರದಕ್ಷಿಣೆ ರಹಿತ ವಿವಾಹ ನಡೆಸಲಾಗುತ್ತಿದೆ ಎಂದು ಸಂಬಂಧಪಟ್ಟ ಕುಟುಂಬದಿಂದ ಸ್ಪಷ್ಟವಾದ ಘೋಷಣೆ ಮಾಡದಿದ್ದರೆ ಯಾವುದೇ ಮದುವೆಗೂ ಹಾಜರಾಗುವುದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ಘೋಷಿಸಿದ್ದಾರೆ.

ಪಾಟ್ನಾ: ವರದಕ್ಷಿಣೆ ರಹಿತ ವಿವಾಹ ನಡೆಸಲಾಗುತ್ತಿದೆ ಎಂದು ಸಂಬಂಧಪಟ್ಟ ಕುಟುಂಬದಿಂದ ಸ್ಪಷ್ಟವಾದ ಘೋಷಣೆ ಮಾಡದಿದ್ದರೆ ಯಾವುದೇ ಮದುವೆಗೂ ಹಾಜರಾಗುವುದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ಘೋಷಿಸಿದ್ದಾರೆ.

ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿಯಲ್ಲಿ ತಮ್ಮ ಸಮಾಜಿಕ ಸುಧಾರ್ ಅಭಿಯಾನ(ಸಮಾಜ ಸುಧಾರಣಾ ಅಭಿಯಾನ)ಕ್ಕೆ ಚಾಲನೆ ನೀಡಿ ಮಾತನಾಡಿದ ನಿತೀಶ್ ಕುಮಾರ್ ಅವರು, “ಮದುವೆ ಕಾರ್ಡ್‌ಗಳಲ್ಲಿ ಇದು ವರದಕ್ಷಿಣೆ ಪಡೆಯದ ಮದುವೆ ಎಂಬ ಘೋಷಣೆಯನ್ನು ಹೊಂದಿರದಿದ್ದರೆ ಆಪ್ತರು ಸೇರಿದಂತೆ ನಾನು ಯಾವುದೇ ವಿವಾಹ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ" ಎಂದು ಹೇಳಿದ್ದಾರೆ.

ಸಮಾಜವನ್ನು ದೀರ್ಘಕಾಲ ಕಾಡುತ್ತಿರುವ ವರದಕ್ಷಿಣೆ ನಿಷೇಧ ಮತ್ತು ಬಾಲ್ಯವಿವಾಹದಂತಹ ಸಾಮಾಜಿಕ ಅನಿಷ್ಟಗಳನ್ನು ನಿವಾರಿಸಲು ತಾವು ಈ ನಿರ್ಧಾರಕ್ಕೆ ಬಂದಿರುವುದಾಗಿ ಎಂದು ಬಿಹಾರ ಸಿಎಂ ತಿಳಿಸಿದ್ದಾರೆ.

ಸಾಮಾಜಿಕ ಸುಧಾರಣೆಗಳಿಲ್ಲದೆ ಅಭಿವೃದ್ಧಿಯ ಹಿಂದಿನ ಉದ್ದೇಶವು ನಿಷ್ಪ್ರಯೋಜಕವಾಗಿದೆ. ಅದಕ್ಕಾಗಿಯೇ ನಾನು ಜವಾಬ್ದಾರಿಯನ್ನು ವಹಿಸಿಕೊಂಡಾಗಿನಿಂದ ನಿರಂತರವಾಗಿ ಅದರ ಮೇಲೆ ಕೆಲಸ ಮಾಡುತ್ತಿದ್ದೇನೆ ಎಂದರು.

ಜನಸಾಮಾನ್ಯರ ಹಿತಾಸಕ್ತಿಗಾಗಿ ಸಾಮಾಜಿಕ ಅನಿಷ್ಟಗಳನ್ನು ತೊಡೆದುಹಾಕುವ ಗುರಿಯನ್ನು ಹೊಂದಿರುವ ಸಾಮಾಜಿಕ ಸುಧಾರಣಾ ಅಭಿಯಾನವನ್ನು ವೇಗಗೊಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಮಹಿಳೆಯರಿಗೆ ನಿತೀಶ್ ಕುಮಾರ್ ಪ್ರೋತ್ಸಾಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆಗೆ ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ

ಹಿಸಾರ್ ಜಿಲ್ಲಾ ನ್ಯಾಯಾಲಯದ ಹೊರಗೆ ಗ್ಯಾಂಗ್‌ಸ್ಟರ್ ವಿನೋದ್ ಪನ್ನುಗೆ ಗುಂಡಿಕ್ಕಿ ಹತ್ಯೆ

ಎಲ್ಲರಿಗೂ ಕಾನೂನು ಒಂದೇ: ಅನುಮತಿ ಇಲ್ಲದೆ ತಮ್ಮ ಪೋಸ್ಟರ್‌ ಅಂಟಿಸಿದ್ದಕ್ಕೆ ಮೂರು FIR ದಾಖಲು!

'ಬಾಹುಬಲಿ'ಗೆ ಏನಾಯಿತು?: ಪ್ರಭಾಸ್ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಆತಂಕ!

ಕೇಂದ್ರದಿಂದ ಮಹತ್ವದ ನಿರ್ಧಾರ: ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪನೆ