ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಓಮಿಕ್ರಾನ್ ಕೇಸು 236ಕ್ಕೆ ಏರಿಕೆ: 7,495 ಹೊಸ ಕೋವಿಡ್ ಪ್ರಕರಣ, 434 ಮಂದಿ ಸಾವು

ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮಧ್ಯೆ ಸಚಿವಾಲಯ ಇಂದು ನೀಡಿರುವ ಅಂಕಿಅಂಶದಂತೆ ದೇಶದಲ್ಲಿ ಇದುವರೆಗೆ 236 ಓಮಿಕ್ರಾನ್ ಕೇಸುಗಳು ವರದಿಯಾಗಿವೆ. ನಿನ್ನೆಯವರೆಗೆ 213 ಪ್ರಕರಣಗಳಿದ್ದವು. ಒಂದೇ ದಿನದಲ್ಲಿ 23 ಕೇಸುಗಳು ಹೆಚ್ಚಾಗಿವೆ.

ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮಧ್ಯೆ ಸಚಿವಾಲಯ ಇಂದು ನೀಡಿರುವ ಅಂಕಿಅಂಶದಂತೆ ದೇಶದಲ್ಲಿ ಇದುವರೆಗೆ 236 ಓಮಿಕ್ರಾನ್ ಕೇಸುಗಳು ವರದಿಯಾಗಿವೆ. ನಿನ್ನೆಯವರೆಗೆ 213 ಪ್ರಕರಣಗಳಿದ್ದವು. ಒಂದೇ ದಿನದಲ್ಲಿ 23 ಕೇಸುಗಳು ಹೆಚ್ಚಾಗಿವೆ.

ಓಮಿಕ್ರಾನ್ ನಿಂದ ಬಾಧಿತರಾಗುವ ಜನಸಂಖ್ಯೆಯ ಬಗ್ಗೆ ಡೇಟಾವನ್ನು ಸಂಗ್ರಹಿಸುವುದಕ್ಕಾಗಿ ಕೋವಿಡ್-19 ವಾರ್ ರೂಮ್ ಗಳನ್ನು ಪುನಾರಂಭಗೊಳಿಸಲು ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಭಾರತ ಸೇರಿದಂತೆ ಜಗತ್ತಿನಾದ್ಯಂತ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. 

ಕರ್ನಾಟಕದಲ್ಲಿ 23 ಪ್ರಕರಣ: ಒಟ್ಟು 236 ಓಮಿಕ್ರಾನ್ ಪ್ರಕರಣಗಳಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಗಳಲ್ಲಿ ಅತಿ ಹೆಚ್ಚು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ 65 ಮತ್ತು ದೆಹಲಿಯಲ್ಲಿ 64 ಪ್ರಕರಣಗಳಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಇಲ್ಲಿಯವರೆಗೆ 104 ರೋಗಿಗಳು ಓಮಿಕ್ರಾನ್ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ. 

ಮೈಸೂರಿನಲ್ಲಿ ಮೊದಲ ಓಮಿಕ್ರಾನ್ ಕೇಸು ವರದಿಯಾಗಿದ್ದು 9 ವರ್ಷದ ಸ್ವಿಡ್ಜರ್ಲಾಂಡ್ ನಿಂದ ಬಂದ ಬಾಲಕಿಯಲ್ಲಿ ಪತ್ತೆಯಾಗಿದೆ. ಕರ್ನಾಟಕದಲ್ಲಿ ಒಟ್ಟು 23 ಪ್ರಕರಣಗಳು ವರದಿಯಾಗಿವೆ. ಕೋವಿಡ್ ಮೂರನೇ ಅಲೆಯ ಈ ಹೊತ್ತಿನಲ್ಲಿ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7 ಸಾವಿರದ 495 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಮೊನ್ನೆಗಿಂತ ಸುಮಾರು 1 ಸಾವಿರದಷ್ಟು ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 434 ಮಂದಿ ಕಳೆದ 24 ಗಂಟೆಗಳಲ್ಲಿ ಮೃಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 78 ಸಾವಿರದ 291 ಆಗಿದೆ. 

ಕಳೆದ 24 ಗಂಟೆಗಳಲ್ಲಿ 6.960 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಇದುವರೆಗೆ ಒಟ್ಟಾರೆಯಾಗಿ 3 ಕೋಟಿಯ 42 ಲಕ್ಷದ 08 ಸಾವಿರದ 926 ಮಂದಿ ಗುಣಮುಖರಾಗಿದ್ದಾರೆ. ಗುಣಮುಖ ಹೊಂದಿದವರ ಪ್ರಮಾಣ ಶೇಕಡಾ 98.40ರಷ್ಟಾಗಿದ್ದು ಕಳೆದ ವರ್ಷ ಮಾರ್ಚ್ ನಿಂದ ಅತಿ ಕಡಿಮೆಯಾಗಿದೆ.

ದೇಶದಲ್ಲಿ ಕೋವಿಡ್ ವೈರಸ್ ನ ವಿರುದ್ಧ ಹೋರಾಡಲು ಲಸಿಕಾ ಅಭಿಯಾನ ಆರಂಭವಾದ ನಂತರ ಇಲ್ಲಿಯವರೆಗೆ 1,39,69,76,774 ಡೋಸ್ ಲಸಿಕೆ ವಿತರಣೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 57 ಲಕ್ಷ ಡೋಸ್ ಗಳನ್ನು ನೀಡಲಾಗಿದೆ. ಇದುವರೆಗೆ ದೇಶದಲ್ಲಿ 66 ಕೋಟಿಯ 86 ಲಕ್ಷ ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT