ಯೋಗಿ ಆದಿತ್ಯನಾಥ್ 
ದೇಶ

ಅಯೋಧ್ಯೆಯಲ್ಲಿ ಬಿಜೆಪಿ ನಾಯಕರ ಸಂಬಂಧಿಕರಿಂದಲೇ ಭೂಕಬಳಿಕೆ: ಯೋಗಿ ಸರ್ಕಾರ ತನಿಖೆಗೆ ಆದೇಶ

ರಾಮ ಮಂದಿರದ ಬಳಿ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ಸಂಬಂಧಿಕರು ಭೂಮಿಯನ್ನು ಕಬಳಿಸಿದ್ದಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ.

ಲಕ್ನೋ:  ಅಯೋಧ್ಯೆಯಲ್ಲಿ ನಿರ್ಮಿತವಾಗುತ್ತಿರುವ ರಾಮ ಮಂದಿರದ ಬಳಿ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ಸಂಬಂಧಿಕರು ಭೂಮಿಯನ್ನು ಕಬಳಿಸಿದ್ದಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ.

ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ, ರಾಮ ಮಂದಿರ ನಿರ್ಮಾಣ ಕುರಿತು ಇದ್ದ ವಿವಾದಕ್ಕೆ ತೆರೆಬಿದ್ದ ನಂತರ ಶಾಸಕರು, ಮೇಯರ್ ಗಳು, ಆಯುಕ್ತರ ಸಂಬಂಧಿಕರು, ಎಸ್‍ಡಿಎಂ ಮತ್ತು ಡಿಐಜಿ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ವದಂತಿ ಹರಡಿತ್ತು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಷಯವನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ಕಂದಾಯ ಇಲಾಖೆಗೆ ಆದೇಶಿಸಿದ್ದಾರೆ ಎಂದು ಉತ್ತರಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ಮಾಹಿತಿ ನೀಡಿದರು.

‘ಧರ್ಮದ ನೆಪದಲ್ಲಿ ಹಿಂದುತ್ವ ದರೋಡೆ ನಡೆಸುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಸತ್ಯದ ಮಾರ್ಗವನ್ನು ಅನುಸರಿಸುತ್ತದೆ. ಹಿಂದುತ್ವವು ಧರ್ಮದ ಸೋಗಿನಲ್ಲಿ ದರೋಡೆ ಮಾಡುತ್ತದೆ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿ ಸುದ್ದಿಯ ವರದಿಯನ್ನು ಟ್ಯಾಗ್ ಮಾಡಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಸದನದಲ್ಲಿ ಇದೇ ವಿಷಯ ಪ್ರಸ್ತಾಪಿಸಲು ಪ್ರಯತ್ನಿಸಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಇದನ್ನು “ಭೂ ಹಗರಣ” ಎಂದು ಕರೆದಿದ್ದರು, ಬಿಜೆಪಿಗೆ ಸಂಪರ್ಕ ಹೊಂದಿದ ಜನರು ಅಯೋಧ್ಯೆ ನಗರದೊಳಗೆ ಭೂಮಿಯನ್ನು ಬಹಿರಂಗವಾಗಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ? ಇದು ದೇಶದ್ರೋಹಕ್ಕಿಂತ ಕಡಿಮೆಯೇ? ಬಿಜೆಪಿ ಈಗ ಅಯೋಧ್ಯೆಯಲ್ಲಿ ‘ಅಂಧೇರ್ ನಗರ್, ಚೌಪತ್ ರಾಜಾ’ದ ವ್ಯವಹಾರ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT