ಕೇರಳ ಮೀನುಗಾರಿಕೆ ಸಚಿವ ಸಜಿ ಚೆರಿಯನ್ 
ದೇಶ

ಕೇರಳ ಸಚಿವ ಸಜಿ ಚೆರಿಯನ್ ಅವರ ಹೊಸ ಶೌಚಾಲಯಕ್ಕೆ ಸರ್ಕಾರಿ ಯೋಜನೆಯ ಮನೆ ನಿರ್ಮಾಣಕ್ಕಿಂತಲೂ ಹೆಚ್ಚು ವೆಚ್ಚ!

ಕೇರಳ ಸರ್ಕಾರ ತೀವ್ರವಾದ ವಿವಾದಕ್ಕೆ ಗುರಿಯಾಗಿದ್ದು, ಸಚಿವರೊಬ್ಬರಿಗಾಗಿ ನೂತನ ಶೌಚಾಲಯಕ್ಕೆ ಸರ್ಕಾರಿ ಯೋಜನೆಯ ಮನೆಯ ನಿರ್ಮಾಣದ ವೆಚ್ಚಕ್ಕಿಂತಲೂ ಹೆಚ್ಚು ಹಣ ಬಿಡುಗಡೆ ಮಾಡಿದೆ. 

ತಿರುವನಂತಪುರಂ: ಕೇರಳ ಸರ್ಕಾರ ತೀವ್ರವಾದ ವಿವಾದಕ್ಕೆ ಗುರಿಯಾಗಿದ್ದು, ಸಚಿವರೊಬ್ಬರಿಗಾಗಿ ನೂತನ ಶೌಚಾಲಯಕ್ಕೆ ಸರ್ಕಾರಿ ಯೋಜನೆಯ ಮನೆಯ ನಿರ್ಮಾಣದ ವೆಚ್ಚಕ್ಕಿಂತಲೂ ಹೆಚ್ಚು ಹಣ ಬಿಡುಗಡೆ ಮಾಡಿದೆ. 

ಲೈಫ್ ಮಿಷನ್ ಯೋಜನೆಯ ಸರ್ಕಾರಿ ಯೋಜನೆಯಡಿ ನಿರ್ಮಾಣ ಮಾಡುವ ಮನೆಗಳಿಗೆ 4 ಲಕ್ಷ ರೂಪಾಯಿ ಹಣವನ್ನು ನೀಡಲಾಗುತ್ತದೆ. ಆದರೆ ಸರ್ಕಾರ ತನ್ನ ಸಚಿವರಿಗೆ ನೂತನ ಶೌಚಾಲಯ ನಿರ್ಮಾಣ ಮಾಡುವುದಕ್ಕೆ 4.10 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿದೆ. 

ಡಿ.21 ರಂದು ಸಾಮಾನ್ಯ ಆಡಳಿತ ಇಲಾಖೆ ಆದೇಶ ಹೊರಡಿಸಿದ್ದು ವಿವಾದಕ್ಕೆ ದಾರಿ ಮಾಡಿಕೊಟ್ಟಿವೆ.
 
ರಾಜ್ಯ ಮೀನುಗಾರಿಕೆ ಸಚಿವ ಸಜಿ ಚೆರಿಯನ್ ಅವರಿಗೆ ಈ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಸಿಪಿಐ-ಎಂ ನಿಂದ ಆಯ್ಕೆಯಾಗಿದ್ದ ಶಾಸಕರನ್ನು ಪಿಣರಾಯಿ ವಿಜಯನ್ ಸರ್ಕಾರ ಎರಡನೇ ಅವಧಿಯಲ್ಲಿ ಸಚಿವ ಸಂಪುಟಕ್ಕೆ ಸೇರಿಸಿಕೊಂಡು ಅಚ್ಚರಿ ಮೂಡಿಸಿತ್ತು. 

ಚೆರಿಯನ್ (56) 2018 ರಲ್ಲಿ ಅಳಪ್ಪುಳ ಜಿಲ್ಲೆಯ ಚೆಂಗನೂರ್ ವಿಧಾನಸಭಾ ಕ್ಷೇತ್ರದ ಅಂದಿನ ಹಾಲಿ ಸಚಿವ ಕೆ.ಕೆ ರಾಮಚಂದ್ರನ್ ನಾಯರ್ ಸಾವನ್ನಪ್ಪಿದ ನಂತರ ಚುನಾವಣೆ ಎದುರಿಸಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದರು. 

ಏಪ್ರಿಲ್ 6 ರ ವಿಧಾನಸಭಾ ಚುನಾವಣೆಯಲ್ಲಿ ಮರು ಆಯ್ಕೆಗೊಂಡ ಇವರು ರಾಜ್ಯ ಸಚಿವರಾಗಿ ಆಯ್ಕೆಯಾಗಿದ್ದರು. ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿ ಎದುರಿಸುತ್ತಿದ್ದರೂ ಸಚಿವರಿಗೆ ಐಷಾರಾಮಿ ಶೌಚಾಲಯ ನಿರ್ಮಾಣ ಮಾಡಿರುವುದಕ್ಕೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. 

ಇದು ಎಲ್ಲಾ ರಾಜಕೀಯ ಪಕ್ಷಗಳ ಅವಧಿಯಲ್ಲೂ ನಡೆದಿದೆ. ಹಿಂದೆಲ್ಲಾ ಎಡ ಪಕ್ಷಗಳು ಈ ರೀತಿಯ ಅನಾವಶ್ಯಕ ಖರ್ಚುಗಳಿಗೆ ಮುಂದಾಗುವುದಿಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಅದು ಇತಿಹಾಸ, ಎಡಪಕ್ಷ ಬೇರೆ ಯಾವ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT