ಓಮಿಕ್ರಾನ್ (ಸಾಂಕೇತಿಕ ಚಿತ್ರ) 
ದೇಶ

ಓಮಿಕ್ರಾನ್ ಹೆಚ್ಚಳ: ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಕೇಂದ್ರ ತಂಡ ನಿಯೋಜನೆ

ದೇಶದ ಹಲವು ಪ್ರದೇಶಗಳಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಳದ ಆತಂಕ ಕಾಡುತ್ತಿದ್ದು, ಕೇಂದ್ರ ತಂಡಗಳನ್ನು 10 ರಾಜ್ಯಗಳಲ್ಲಿ ನಿಯೋಜನೆ ಮಾಡುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ನವದೆಹಲಿ: ದೇಶದ ಹಲವು ಪ್ರದೇಶಗಳಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಳದ ಆತಂಕ ಕಾಡುತ್ತಿದ್ದು, ಕೇಂದ್ರ ತಂಡಗಳನ್ನು 10 ರಾಜ್ಯಗಳಲ್ಲಿ ನಿಯೋಜನೆ ಮಾಡುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಲಸಿಕೆ ನೀಡುತ್ತಿರುವುದರಲ್ಲಿ ಕಡಿಮೆ ವೇಗ ಇರುವ ರಾಜ್ಯಗಳು, ಕೋವಿಡ್-19 ಸೋಂಕು ಅಥವಾ ಕೋವಿಡ್-19 ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚಿರುವ 10 ರಾಜ್ಯಗಳನ್ನು ಪಟ್ಟಿ ಮಾಡಲಾಗಿದ್ದು, ಕೇಂದ್ರ ತಂಡವನ್ನು ನಿಯೋಜಿಸಲಾಗುತ್ತಿದೆ. 

ತಮಿಳುನಾಡು, ಕರ್ನಾಟಕ, ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್, ಪಂಜಾಬ್, ಮಹಾರಾಷ್ಟ, ಕೇರಳ, ಮಿಜೊರಾಮ್ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಈ ತಂಡ ನಿಯೋಜನೆಗೊಂಡು ಪರಿಸ್ಥಿತಿ ಸುಧಾರಣೆಗೆ ಸ್ಥಳೀಯ ಆರೋಗ್ಯ ಇಲಾಖೆ, ಆಡಳಿತದೊಂದಿಗೆ ಕಾರ್ಯನಿರ್ವಹಣೆ ಮಾಡಲಿದೆ. 

ಸೋಂಕು ಹರಡುವಿಕೆಯ ಪತ್ತೆ, ನಿಗಾ ವಹಿಸುವುದು, ಕಂಟೈನ್ಮೆಂಟ್ ಕಾರ್ಯಾಚರಣೆಗಳು ಹಾಗೂ ಕೋವಿಡ್-19 ಟೆಸ್ಟಿಂಗ್ ಐಎನ್ಎಸ್ಎಸಿಒಜಿ ನೆಟ್ವರ್ಕ್ ಗೆ ಜಿನೋಮ್ ಸೀಕ್ವೆನ್ಸಿಂಗ್ ಗಾಗಿ ಸ್ಯಾಂಪಲ್ ಗಳನ್ನು ಕಳಿಸುವುದು ಮುಂತಾದ ಪ್ರಮುಖ ವಿಷಯಗಳತ್ತ ಈ ಕೇಂದ್ರ ತಂಡ ವಿಶೇಷ ಗಮನ ಹರಿಸಲಿದೆ. 

ಕೋವಿಡ್-19 ತಡೆಗೆ ಸೂಕ್ತ ನಡವಳಿಕೆ ಜಾರಿಗೆ ತರುವುದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಲಭ್ಯತೆ, ಆಂಬುಲೆನ್ಸ್, ವೆಂಟಿಲೇಟರ್, ವೈದ್ಯಕೀಯ ಆಕ್ಸಿಜನ್, ಕೋವಿಡ್-19 ಲಸಿಕೆ ಪ್ರಗತಿ ವಿಷಯಗಳಿಗೂ ಈ ಕೇಂದ್ರ ತಂಡವೇ ಹೊಣೆಯಾಗಿರಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT