ಪ್ರಧಾನಿ ಮೋದಿ, ಡೆಸ್ಮಂಡ್ ಟುಟು 
ದೇಶ

ದ.ಆಫ್ರಿಕಾದ ಆರ್ಚ್ ಬಿಷಪ್ ಡೆಸ್ಮಂಡ್ ಟುಟು ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ದಕ್ಷಿಣ ಆಫ್ರಿಕಾದ ಕ್ರೈಸ್ತ ಧರ್ಮಗುರು ಆರ್ಚ್ ಬಿಷಪ್ ಡೆಸ್ಮಂಡ್ ಟುಟು ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಂಧಿ ಅನುಯಾಯಿ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಾಗಿದ್ದ ಡೆಸ್ಮಂಡ್ ಟುಟು 90 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ನವದೆಹಲಿ: ದಕ್ಷಿಣ ಆಫ್ರಿಕಾದ ಕ್ರೈಸ್ತ ಧರ್ಮಗುರು ಆರ್ಚ್ ಬಿಷಪ್ ಡೆಸ್ಮಂಡ್ ಟುಟು ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಂಧಿ ಅನುಯಾಯಿ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಾಗಿದ್ದ ಡೆಸ್ಮಂಡ್ ಟುಟು 90 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಆರ್ಚ್ ಬಿಷಪ್ ಟುಟು ಅವರು ಜಗತ್ತಿನ ಕೋಟ್ಯಂತರ ಜನರ ಪಾಲಿಗೆ ದಾರಿ ದೀಪವಾಗಿದ್ದರು. ಮಾನವ ಘನತೆ ಮತ್ತು ಸಮಾನತೆಯಡೆಗಿನ ಕೊಡುಗೆಗಾಗಿ ಅವರು ಸದಾ ಸ್ಮರಣೀಯರು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.  

1990 ರ ದಶಕದ ಅಂತ್ಯದಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಡೆಸ್ಮೆಂಡ್ ಟುಟು ಇತ್ತೀಚಿನ ವರ್ಷಗಳಲ್ಲಿ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. 

ದಕ್ಷಿಣ ಆಫ್ರಿಕಾದಲ್ಲಿ ಅಹಿಂಸಾತ್ಮಕ ಹೋರಾಟದ ಮೂಲಕ ವರ್ಣಬೇಧ ನೀತಿ ಹೋಗಲಾಡಿಸುವಲ್ಲಿ  ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ 1984ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಡೆಸ್ಮಂಡ್ ಟುಟು ಪಡೆದುಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ. ಗೃಹಲಕ್ಷ್ಮಿ ಹಣ ಜಮೆ!

NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವ್ಯಕ್ತಿಯೊಬ್ಬನ ಬಂಧನ; FIR ದಾಖಲಿಸಿದ CBI!

EV ವಾಹನ ಚಾರ್ಜಿಂಗ್‌ಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಕುಮಾರಸ್ವಾಮಿ ಅನುಮೋದನೆ; ರಾಜ್ಯಕ್ಕೆ ಸಿಕ್ಕಿದ್ದೆಷ್ಟು?

'ನಿಜ ಏನು ಅಂದ್ರೆ..': ಮೋದಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು ನಟಿ Ramya ವ್ಯಂಗ್ಯ; ಹೇಳಿದ್ದೇನು?

SCROLL FOR NEXT