ಸಾಂದರ್ಭಿಕ ಚಿತ್ರ 
ದೇಶ

ತ್ವರಿತಗತಿಯಲ್ಲಿ ಕೋವಿಡ್ ಲಸಿಕೆ ನೀಡಿಕೆ ವೇಗಗೊಳಿಸಿ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರದ ಸೂಚನೆ

ಮೊದಲ ಡೋಸ್ ಗೆ ಅರ್ಹರಾಗಿರುವ ಎಲ್ಲಾ ಜನರಿಗೆ ತ್ವರಿತಗತಿಯಲ್ಲಿ ಕೋವಿಡ್ -19 ಲಸಿಕೆ ನೀಡಿಕೆಯನ್ನು ವೇಗಗೊಳಿಸುವಂತೆ ಹಾಗೂ ಎರಡನೇ ಡೋಸ್ ಹಾಕಿಸಿಕೊಳ್ಳದೆ ಬಾಕಿ ಇರುವವರಿಗೆ ಎರಡನೇ ಡೋಸ್ ಗೆ ಖಾತ್ರಿಪಡಿಸುವಂತೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೋಮವಾರ ಸೂಚಿಸಿದೆ. 

ನವದೆಹಲಿ: ಮೊದಲ ಡೋಸ್ ಗೆ ಅರ್ಹರಾಗಿರುವ ಎಲ್ಲಾ ಜನರಿಗೆ ತ್ವರಿತಗತಿಯಲ್ಲಿ ಕೋವಿಡ್ -19 ಲಸಿಕೆ ನೀಡಿಕೆಯನ್ನು ವೇಗಗೊಳಿಸುವಂತೆ ಹಾಗೂ ಎರಡನೇ ಡೋಸ್ ಹಾಕಿಸಿಕೊಳ್ಳದೆ ಬಾಕಿ ಇರುವವರಿಗೆ ಎರಡನೇ ಡೋಸ್ ಗೆ ಖಾತ್ರಿಪಡಿಸುವಂತೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೋಮವಾರ ಸೂಚಿಸಿದೆ. 

ಸಾರ್ವಜನಿಕ ಆರೋಗ್ಯ ಮುಂಜಾಗ್ರತಾ ಕ್ರಮವಾಗಿ ಸೋಂಕಿತ ಪ್ರಕರಣಗಳನ್ನು ಪ್ರಾಮಾಣಿಕ ರೀತಿಯಲ್ಲಿ ಗುರುತಿಸಲು ಪರೀಕ್ಷೆ ಹೆಚ್ಚಿಸುವಂತೆ, ಕಡಿಮೆ ಪರೀಕ್ಷೆಯಿಂದಾಗಿ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ ಕಂಡುಬರದಂತೆ ಖಾತ್ರಿಪಡಿಸುವಂತೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಸಲಹೆ ನೀಡಿದೆ. 

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿರುವ ಹೇಳಿಕೆ ಪ್ರಕಾರ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಪರಿಣಾಮಕಾರಿ ಜಾರಿಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ  ಸೂಚಿಸಲಾಗಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಚುನಾವಣೆ ನಡೆಯಲಿರುವ ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ಮತ್ತು ಪಂಜಾಬ್ ನ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಕೋವಿಡ್ ಹಾಗೂ ಲಸಿಕೆ ಸ್ಥಿತಿಗತಿಯನ್ನು ಪರಿಶೀಲಿಸಿದ್ದಾರೆ. 

ಉತ್ತರಾಖಂಡ್  ಮತ್ತು ಗೋವಾದಲ್ಲಿ ಮೊದಲ ಹಾಗೂ ಎರಡನೇ ಡೋಸ್ ಲಸಿಕಾಕರಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದರೆ ಉತ್ತರ ಪ್ರದೇಶ, ಪಂಜಾಬ್ ಮತ್ತು ಮಣಿಪುರದಲ್ಲಿ ಕೋವಿಡ್ 19 ಲಸಿಕಾಕರಣದ ಸಂಖ್ಯೆ ರಾಷ್ಟ್ರೀಯ ಸರಾಸರಿಗಿಂತ ಕಡಿಮೆಯಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT